ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳಿಗೆ ಮುನ್ನ ಟೀಮ್ ಇಂಡಿಯಾ ಗುವಾಹಟಿಗೆ ಆಗಮಿಸಿದೆ. ಭಾರತೀಯ ಆಟಗಾರರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಭಾರತ ತಂಡಕ್ಕೆ ಜೈಕಾರ ಹಾಕಿದರು. ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ ಅಂತಿಮ ವಿಶ್ವಕಪ್ ತಂಡದಲ್ಲಿ ಸೇರ್ಪಡೆಗೊಂಡಿರುವ ರವಿಚಂದ್ರನ್ ಅಶ್ವಿನ್ ಕೂಡ ಮೆನ್ ಇನ್ ಬ್ಲೂ ಜೊತೆ ಗುವಾಹಟಿಗೆ ಪ್ರಯಾಣ ಬೆಳೆಸಿದರು.
ಅಕ್ಟೋಬರ್ 5 ರಿಂದ ಭಾರತದಲ್ಲಿ ವಿಶ್ವಕಪ್ ಪ್ರಾರಂಭವಾಗುತ್ತಿದೆ. ಟೀಮ್ ಇಂಡಿಯಾ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ ಮತ್ತು ಅಕ್ಟೋಬರ್ 3 ರಂದು ನೆದರ್ಲೆಂಡ್ಸ್ ವಿರುದ್ಧ ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಇದು ತಿರುವನಂತಪುರಂನಲ್ಲಿ ನಡೆಯಲಿದೆ.
2023ರ ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್.ಇಶಾನ್ ಕಿಶನ್, ಕೆಎಲ್ ರಾಹುಲ್. ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್. ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್.
ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್. ಕುಲ್ದೀಪ್ ಯಾದವ್.