ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಮೊದಲ ಗೌರವ ಡಾಕ್ಟರೇಟ್ನ್ನು ಭಾರತೀಯ ಕ್ರೀಡೆಯ ವಿಶಿಷ್ಟ ಪ್ರತಿಭೆ ಪಿ.ಟಿ. ಉಷಾ ಅವರಿಗೆ ಸೋಮವಾರ ಪ್ರದಾನ ಮಾಡಲಾಯಿತು. ಪೆರಿಯ ಕ್ಯಾಂಪಸ್ ನ ಸಬರಮತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಕುಲಪತಿ ಪ್ರೊ.ಎಚ್.ವೆಂಕಟೇಶ್ವರಲು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಪದಕ ಕೈತಪ್ಪಿದ ವಿಚಾರವನ್ನು ಹೇಳಿಕೊಂಡು ಪಿಟಿ ಭಾವುಕರಾದರು.
ಉಪಕುಲಪತಿ ಪ್ರೊ.ಎಚ್.ವೆಂಕಟೇಶ್ವರಲು ಮಾತನಾಡಿ, ಪಿ.ಟಿ ಉಷಾ ರಾಷ್ಟ್ರದ ಹೆಮ್ಮೆ. ರಾಷ್ಟ್ರಕ್ಕೆ ಮಾದರಿಯಾದವರನ್ನು ಗೌರವಿಸುವುದು ವಿಶ್ವವಿದ್ಯಾಲಯದ ಕರ್ತವ್ಯ. ಉಷಾ ಅವರ ಜೀವನ ಮತ್ತು ಸಾಧನೆಗಳು ಪಿ.ಟಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತದೆ ಎಂದರು.
ಡೀನ್ ಅಕಾಡೆಮಿಕ್ ಪ್ರೊ.ಅಮೃತ್ ಜಿ.ಕುಮಾರ್ ಮತ್ತು ವಿಶೇಷ ಕರ್ತವ್ಯಾಧಿಕಾರಿ ಪ್ರೊ.ರಾಜೇಂದ್ರ ಪಿಲಂಗಟ್ಟಾ ಮಾತನಾಡಿದರು. ಕುಲಸಚಿವ ಡಾ.ಎಂ.ಮುರಳೀಧರನ್ ನಂಬಿಯಾರ್ ಸ್ವಾಗತಿಸಿ, ಪ್ರಭಾರ ಪರೀಕ್ಷಾ ನಿಯಂತ್ರಕ ಪ್ರೊ.ಎಂ.ಎನ್. ಮುಸ್ತಫಾ ಧನ್ಯವಾದವಿತ್ತರು. ಡೀನ್ಗಳು, ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ರೀಡಾ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಗುರುತಿಸಿ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…