ಕ್ರೀಡೆ

‘ತ್ರಿವರ್ಣ ಧ್ವಜ’ ಪ್ರೊಫೈಲ್ ಫೋಟೊ ಹಾಕಿದ ಬಿಸಿಸಿಐಗೆ ಶಾಕ್

ನವದೆಹಲಿ: ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ತಯಾರಿ ಮಾಡಿಕೊಂಡಿದೆ. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೇರವೇರಿಸಿ ರಾಷ್ಟ್ರವನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಇನ್ನು ದೇಶದ ಮೂಲೆ ಮೂಲೆಯಲ್ಲೂ ಧ್ವಜಾರೋಹಣ ನೇರವೇರಲಿದೆ. ಹರ್ ಘರ್ ತಿರಂಗ ಅಭಿಯಾನದಿಂದ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲಿದೆ.

ಇನ್ನು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಮತ್ತಷ್ಟು ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ವ್ಯಾಟ್ಸ್ಆ್ಯಪ್ ಡಿಪಿ, ಸೋಶಿಯಲ್ ಮಿಡಿಯಾದಲ್ಲಿ ಪ್ರೊಫೈಲ್ ಪಿಕ್ ತ್ರಿವರ್ಣ ಧ್ವಜ ಹಾಕುವಂತೆ ಮೋದಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಬಿಸಿಸಿಐ ಟ್ವಿಟರ್ ಖಾತೆಯಲ್ಲಿ ಪ್ರೊಫೈಲ್ ಫೋಟೊ ತ್ರಿವರ್ಣ ಧ್ವಜವಾಗಿ ಬದಲಿಸಿತ್ತು.

ಇದರ ಬೆನ್ನಲ್ಲೇ ಟ್ವಿಟರ್ ಶಾಕ್ ನೀಡಿದೆ. ಬಿಸಿಸಿಐ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ತೆಗೆದು ಹಾಕಿದೆ. ತ್ರಿವರ್ಣ ಧ್ವಜ ಹಾಕಿದ ಬೆನ್ನಲ್ಲೇ ಬಿಸಿಸಿಐ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ತೆಗೆದುಹಾಕಲಾಗಿದೆ. ಟ್ವಿಟರ್ ಹೊಸ ನಿಯಮದ ಪ್ರಕಾರ ಬ್ಲೂಟಿಕ್ ತೆಗೆದುಹಾಕಿದೆ. ಹೊಸ ನಿಯಮದ ಪ್ರಕಾರ ಪ್ರೊಫೈಲ್ ಬದಲಿಸಿದರೆ ಟ್ವಿಟರ್ ಪರಿಶೀಲನೆ ನಡೆಸಿ ಅಧಿಕೃತ ಖಾತೆಯನ್ನು ಖಾತ್ರಿಪಡಿಸಿಕೊಳ್ಳಲಿದೆ.

ಬಳಿಕ ಬ್ಲೂಟಿಕ್ ಮರಳಿ ನೀಡಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕೆಲ ದಿನಗಳು ಹಿಡಿಯಲಿದೆ. ಸ್ವಾತಂತ್ರ್ಯ ದಿನಾಚರಣೆ ಬಳಿಕ ಮತ್ತೆ ಬಿಸಿಸಿಐ ತನ್ನ ಹಳೇ ಪ್ರೊಫೈಲ್ ಹಾಕಿದರೂ ಮತ್ತದೇ ಪ್ರಕ್ರಿಯೆ ಮುಂದುವರಿಯಲಿದೆ.

Ashitha S

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

3 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

11 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

26 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

28 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

29 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

46 mins ago