Categories: ಕ್ರೀಡೆ

ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ಕಿಂಗ್​ ಕೊಹ್ಲಿ

ದೆಹಲಿ: 2024ರ ಐಪಿಎಲ್​ಗೆ ಮಾರ್ಚ್​ 22ರಂದು ವರ್ಣರಂಜಿತ ಚಾಲನೆ ದೊರೆತ್ತಿದ್ದು, 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​ಕಿಂಗ್ಸ್​ ಎದುರು ಸೋಲಿನ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತನ್ನ ಅಭಿಯಾನವನ್ನು ಆರಂಭಿಸಿದೆ.

ಆದರೆ ರನ್​ ಮೆಷಿನ್ ಎಂದೇ ಖ್ಯಾತಿ ಪಡೆದಿರುವ​ ವಿರಾಟ್​ ಕೊಹ್ಲಿ ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಒಂದನ್ನು ಬರೆದಿದ್ದಾರೆ. ಈ ಮೂಲಕ ಟಿ-20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 6 ರನ್ ಕಲೆಹಾಕಿದ ಕೂಡಲೇ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

360 ಟಿ-20 ಇನ್ನಿಂಗ್ಸ್​ ಆಡಿರುವ ವಿರಾಟ್​ ಕೊಹ್ಲಿ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್​ಮನ್​ ಆಗಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೈರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಇದ್ದಾರೆ. ಆದರೆ, ಅತಿ ವೇಗವಾಗಿ 12000 ರನ್ ಪೂರೈಸಿದ ವಿಚಾರಕ್ಕೆ ಬರುವುದಾದರೆ ವಿರಾಟ್ ಎರಡನೇ ಸ್ಥಾನದಲ್ಲಿದ್ದಾರೆ.

Ashitha S

Recent Posts

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

3 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

9 hours ago