ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಆರ್ಸಿಬಿ ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್ಗೆ ತೆರಳಿದ್ದರು.
ಈ ಪಂದ್ಯ ಮುಗಿದ ಬಳಿಕ ಪಂದ್ಯ ಸಿಎಸ್ಕೆ ಆಟಗಾರರು ಹಸ್ತಲಾಘವ ನೀಡಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಗೆಲುವಿನ ಖುಷಿಯಲ್ಲಿದ್ದ ಆರ್ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.
ಆರ್ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಡ್ರೆಸ್ಸಿಂಗ್ ರೂಮ್ನತ್ತ ಮುಖ ಮಾಡಿದ್ದರು. ಧೋನಿಯ ಈ ನಡೆಯು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಒಂದು ತಂಡದ ಸಂಭ್ರಮ ಮುಗಿಯುವ ತನಕ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಕೂಲ್ ಕ್ಯಾಪ್ಟನ್ರನ್ನು ಪ್ರಶ್ನಿಸಿದ್ದರು.
ಈ ಘಟನೆಯ ಮುಂದೇನಾಯ್ತು ಎಂಬುದರ ಮತ್ತೊಂದು ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಿಎಸ್ಕೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದ ಬಳಿಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಿಕೊಂಡು ಹೋಗಿ ಹಸ್ತಲಾಘವ ನೀಡಿದರು.