Bengaluru 27°C
Ad

ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಿಕೊಂಡು ಹೋಗಿ ಹಸ್ತಲಾಘವ ನೀಡಿದ ವಿರಾಟ್ ಕೊಹ್ಲಿ

ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು.

ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು.

Ad
300x250 2

ಈ ಪಂದ್ಯ ಮುಗಿದ ಬಳಿಕ ಪಂದ್ಯ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಡ್ರೆಸ್ಸಿಂಗ್ ರೂಮ್​ನತ್ತ ಮುಖ ಮಾಡಿದ್ದರು. ಧೋನಿಯ ಈ ನಡೆಯು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಒಂದು ತಂಡದ ಸಂಭ್ರಮ ಮುಗಿಯುವ ತನಕ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಕೂಲ್ ಕ್ಯಾಪ್ಟನ್​ರನ್ನು ಪ್ರಶ್ನಿಸಿದ್ದರು.

ಈ ಘಟನೆಯ ಮುಂದೇನಾಯ್ತು ಎಂಬುದರ ಮತ್ತೊಂದು ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಿಎಸ್​ಕೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದ ಬಳಿಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಿಕೊಂಡು ಹೋಗಿ ಹಸ್ತಲಾಘವ ನೀಡಿದರು.

Ad
Ad
Nk Channel Final 21 09 2023
Ad