ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅದರಂತೆ ಕುಲ್ದೀಪ್ ಯಾದವ್ ಬದಲಿಗೆ ಯುವ ಸ್ಪಿನ್ನರ್ ರವಿ ಬಿಷ್ಣೋಯ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗಿದೆ.
ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ರನ್ಗಳ ರೋಚಕ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಅತ್ತ ಐದು ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ಇದೀಗ 2ನೇ ಪಂದ್ಯದಲ್ಲೂ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿರುದ್ಧ ಒತ್ತಡ ಹೇರುವ ವಿಶ್ವಾಸದಲ್ಲಿದೆ.