ಲಕ್ನೋ: ವಿಶ್ವಕಪ್ ನಲ್ಲಿ ಭಾರತ ತಂಡ ಗೆದ್ದು ಬರಲಿ ಭಾರತ ತಂಡ ಗೆದ್ದುಬರಲಿ ಎಂದು ರಾಜ್ಯದ ವಿವಿಧ ದೇಗುಲಗಳು ಹಾಗೂ ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಅವರು ಶುಕ್ರವಾರದ ಪ್ರಾರ್ಥನೆ ಬಳಿಕ, ವಿಶ್ವಕಪ್ ಫೈನಲ್ ನಲ್ಲಿ ಭಾರತದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿರುವಂತೆ ಕರೆ ನೀಡಿದ್ದಾರೆ. ಈ ನಡುವೆ ಟೀಮ್ ಇಂಡಿಯಾ ವಿಶ್ವಕಪ್ 2023 ರಲ್ಲಿ ಫೈನಲ್ ತಲುಪಲು ಪ್ರಮುಖ ಕಾರಣರಾಗಿರುವ ಮೊಹಮ್ಮದ್ ಶಮಿ ಅವರ ತಾಯಿ ಕೂಡ ಟೀಮ್ ಇಂಡಿಯಾಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಇಡೀ ಭಾರತ ಕ್ರಿಕೆಟ್ ತಂಡ ತನ್ನ ಮಗನಿದ್ದಂತೆ ಎಂದು ಮೊಹಮ್ಮದ್ ಶಮಿ ಅವರ ತಾಯಿ ಅಂಜುಮ್ ಅರಾ ಹೇಳಿದ್ದಾರೆ. ಅಲ್ಲದೆ ವಿಶ್ವಕಪ್ ಗೆದ್ದು ಎಲ್ಲರೂ ಮನೆಗೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.