ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ತನ್ನ ಎರಡನೇ ಪಂದ್ಯದಲ್ಲಿಯೂ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ ಗುಜರಾತ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿತು. ಈ ಮೂಲಕ ಗುಜರಾತ್ ಜೈಂಟ್ಸ್ ತಂಡವು 20 ಓವರ್ ಗೆ 7 ವಿಕೆಟ್ ಗೆ 107 ರನ್ ಗಳಿಸುವ ಮೂಲಕ ಆರ್ಸಿಬಿ ತಂಡಕ್ಕೆ 108 ರನ್ ಟಾರ್ಗೆಟ್ ನೀಡಿತು.
ಕೆಳ ಕ್ರಮಾಂಕದಲ್ಲಿ ಆರ್ಸಿಬಿ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೇಮಲತಾ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುಜರಾತ್ ಜೈಂಟ್ಸ್ ತಂಡವು 107 ರನ್ ಕಲೆಹಾಕಿತು.
108 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ಪರ ಸೋಫಿ ಡಿವೈನ್ (6) ಮತ್ತೊಮ್ಮೆ ವಿಫಲರಾದರು. ಮತ್ತೊಂದೆಡೆ ನಾಯಕಿಯ ಆಟವಾಡಿದ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 43 ರನ್ ಬಾರಿಸಿ ಮಿಂಚಿದರು.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…