Categories: ಕ್ರೀಡೆ

ಆರ್​ಸಿಬಿ ಕಪ್ ಗೆದ್ದ ತಕ್ಷಣ ಮಂಧಾನಗೆ‌ ಬಂತು ಕಿಂಗ್ ಕೊಹ್ಲಿಯ ವಿಡಿಯೋ ಕಾಲ್

ದೆಹಲಿ: 16 ವರ್ಷವೂ ಈ ಬಾರಿ ಕಪ್ ನಮ್ದೇ ಎಂದು ಹೇಳುತ್ತಿದ್ದ ಅಭಿಮಾನಿಗಳ ಟ್ಯಾಗ್‌ ಲೈನ್‌ನ್ನು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ಸಿಬಿ ವನಿತೆಯರು ನಿಜ ಮಾಡಿದ್ದಾರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್‌ನಲ್ಲಿ ಮಣಿಸಿದ ಸ್ಮೃತಿ ಮಂಧನಾ ತಂಡ ಮಹಿಳಾ ಪ್ರೀಮಿಯರ್ ಲೀಗ್‌ನ ಪ್ರಶಸ್ತಿಯನ್ನು ಪಡೆದು ಬೀಗಿದೆ.

ಮೊದಲ ಬೌಲಿಂಗ್ ನಲ್ಲಿ ಸೋಫಿ ಮೌಲಿನೌ ಒಂದೇ ಓವರ್ ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ ನೀಡಿದರೆ, ಶ್ರೇಯಾಂಕಾ ಪಾಟೀಲ್ 4 ವಿಕೆಟ್ ಕಬಳಿಸಿ ಎದುರಾಳಿಗೆ ಕಾಡಿದರು. ಆರ್‌ಸಿಬಿ ಪರವಾಗಿ ನಾಯಕಿ ಸ್ಮೃತಿ ಮಂಧಾನ, ಸೋಫಿ ಡಿವೈನ್ ಮತ್ತು ಎಲ್ಲಿಸ್ ಪೆರ್ರಿ ಅವರು ಅದ್ಭುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವದರು. ಅಲ್ಲದೆ ಆರ್‌ಸಿಬಿ ಚೊಚ್ಚಲ ಚಾಂಪಿಯನ್ ಪಟ್ಟವನ್ನು ತೊಡಿಸುವಲ್ಲಿ ಸಫಲರಾದರು. ಈ ಗೆಲುವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಸಿಬಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಮಹಿಳಾ ತಂಡಕ್ಕೆ ವಿಡಿಯೋ ಕರೆ ಮಾಡಿ ಅಭಿನಂದಿಸಿದ್ದಾರೆ. ವಿರಾಟ್ ಕೊಹ್ಲಿ ತಂಡದ ನಾಯಕಿ ಸ್ಮೃತಿ ಮಂಧಾನ ಅವರೊಂದಿಗೆ ಮಾತನಾಡಿದ್ದಾರೆ. ಬೃಹತ್ ಗೆಲುವು ಮತ್ತು ಕಪ್ ಗೆದ್ದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಷ್ಟೆ ಅಲ್ಲದೇ ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಮೃತಿ ಮಂಧಾನ ಮತ್ತು ತಂಡಕ್ಕೆ ಟ್ರೋಫಿ ಗೆದ್ದ ಬಳಿಕ ವಿಶೇಷ ಸಂದೇಶವನ್ನು ಹಂಚಿಕೊಂಡರು. ಅವರು ತಮ್ಮ ಸ್ಟೋರಿಯಲ್ಲಿ ‘ಸೂಪರ್ ವುಮೆನ್’ ಎಂಬ ಶೀರ್ಷಿಕೆ ಬರೆದು ಫೋಟೋ ಹಂಚಿಕೊಂಡಿದ್ದಾರೆ.

 

 

Ashitha S

Recent Posts

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

19 mins ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

34 mins ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

1 hour ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

1 hour ago

ಮತದಾರರು ಮತ್ತು ಜಿಲ್ಲಾಡಳಿತಕ್ಕೆ ಆಲಗೂರ್ ಅಭಿನಂದನೆ

ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…

2 hours ago

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ…

2 hours ago