Showing 20 of 643 posts • Page 4 of 33
ಐಪಿಎಲ್ ಪಂದ್ಯಗಳ ಟಿಕೆಟ್ ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಕ್ರಮವಾಗಿ ಟಿಕೆಟ್ ಮಾರಾಟಕ್ಕಿಳಿದಿದ್ದ 11 ಮಂದಿಯನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡ್ರಿಂಕ್ & ಡ್ರೈವ್ ಕೇಸಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ನನ್ನು ಬಂಧಿಸಲಾಗಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಆನ್ಲೈನ್ನಲ್ಲಿ ಟೆಕ್ಕಿಯೊಬ್ಬರಿಗೆ ₹1.45 ಲಕ್ಷ ವಂಚಿಸಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು.
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ವಂಚನೆಗೊಳಗಾಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.
ಐಪಿಎಲ್ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.
ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಅಬ್ಬರಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ತತ್ತರಿಸಿದೆ. ಕೆಕೆಆರ್ ವಿರುದ್ಧ ಎಸ್ಆರ್ಹೆಚ್ 65 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು 2026 ರ ಮಾರ್ಚ್ 26 ರಿಂದ 29 ರವರೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ 140 ಅಂಕಗಳನ್ನು ಗಳಿಸುವ ಮೂಲಕ 9 ನೇ ಬಾರಿಗೆ ಸಮಗ್ರ ಚಾಂಪಿಯನ್ಶಿಪ್ ಗೆದ್ದುಕೊಂಡಿತು. ಸಹ್ಯಾದ್ರಿ ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳನ್ನು ಬಾಚಿಕೊಂಡಿದ್ದಾರ
ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ಪ್ರಾಣ ಕಳೆದುಕೊಂಡ 11 ಮಂದಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಐಪಿಎಲ್ 2026ರ ಪಂದ್ಯದ ವೇಳೆ ವಿಶೇಷ ಗೌರವ ಸಲ್ಲಿಸಲಾಯಿತು.
ಐಪಿಎಲ್ 2026ರ ಕಹಳೆ ಮೊಳಗುವ ಹೊತ್ತಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಕನಿಷ್ಠ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.
ದಾಖಲೆಯ ಐಪಿಎಲ್ ಒಪ್ಪಂದದಲ್ಲಿ 16,000 ಕೋಟಿ ರೂ.ಗೂ ಹೆಚ್ಚು ಬೆಲೆಗೆ ಮಾರಾಟವಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ವಾಧೀನವನ್ನು ಪೂರ್ಣಗೊಳಿಸಿತು.
ಐಪಿಎಲ್ 2026 ಮಾರ್ಚ್ 28ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಸೀಸನ್ ಆರಂಭಕ್ಕೂ ಮೊದಲು BCCI ಕೆಲವು ಪ್ರಮುಖ ನಿಯಮ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ಈ ಬಾರಿ ಟೂರ್ನಿಯ ಮೇಲೆ ಸಾಕಷ್ಟು ಪ್ರಭಾವ ಬೀರುವ ನಿರೀಕ್ಷೆ ಇದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗದ ಬೌಲರ್ ಯಶ್ ದಯಾಳ್ ಅವರು ಪ್ರಸಕ್ತ ಸಾಲಿನ ಐಪಿಎಲ್ ತಂಡವನ್ನು ಸೇರಿಕೊಳ್ಳುತ್ತಿಲ್ಲ ಎಂದು ಆರ್ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಖಚಿತಪಡಿಸಿದ್ದಾರೆ.
ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ ಆರ್ಸಿಬಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೇ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಸ್ಆರ್ಹೆಚ್ ವಿರುದ್ಧ ಆರ್ಸಿಬಿ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಅಲ್ಲದೇ, ಏಪ್ರಿಲ್ 5 ರಂದು ಸಿಎಸ್ಕೆ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಸೆಣಸಲಿದೆ. ತವರಿನಲ್ಲಿ ಎರಡು ಪಂದ್ಯಗಳನ್ನು ಆರ್ಸಿಬಿ ಆಡಲಿದೆ. ಪಂದ್ಯದ ಟಿಕೆಟ್ ತೋರಿಸುವ […]
ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ನ ಆರ್ ಸಿಬಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.
2026 ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಸಂಭ್ರಮಾಚರಣೆ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
ಕರ್ನಾಟಕ ಸಂಘ ದುಬೈ (ಕೆಎಸ್ಡಿ) ಕಾರ್ಯದರ್ಶಿ ಮನೋಹರ್ ಹೆಗ್ಡೆ ಅವರು ಮಾರ್ಚ್ 9 ರಿಂದ ಮಾರ್ಚ್ 14, 2026 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 34 ನೇ ಭಾರತ ರಾಷ್ಟ್ರೀಯ ಟೆನ್ಪಿನ್ ಬೌಲಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ಅವರು ಚಾಂಪಿಯನ್ಶಿಪ್ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಪ್ರತಿನಿಧಿಸುವ ಏಕೈಕ ಕನ್ನಡಿಗರಾಗಿದ್ದಾರೆ.
2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾನುವಾರ ಡ್ರೆಸ್ಸಿಂಗ್ ರೂಮ್ನಲ್ಲಿರುವ ಜನರಿಗೆ ಮಾತ್ರ ಜವಾಬ್ದಾರನಾಗಿರುತ್ತೇನೆ ಎಂದು ಹೇಳಿದ್ದಾರೆ ಮತ್ತು ಭಾರತದ ಯಶಸ್ವಿ ಟಿ20 ವಿಶ್ವಕಪ್ ಟೈಲ್ ಡಿಫೆನ್ಸ್ ಅನ್ನು ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ಗೆ ಅರ್ಪಿಸಿದ್ದಾರೆ.