ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ನೂರಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿ ಎಂಟು ಸಾವಿರಕ್ಕೂ ಅಧಿಕ ಬಿಡಿ ಲೇಖನಗಳನ್ನು ಬರೆದು ಸಾಹಿತ್ಯಕೃಷಿಯನ್ನೇ ಬದುಕು ಮಾಡಿಕೊಂಡು ಸಾರಸ್ವತ ಲೋಕದಲ್ಲಿ ತಮ್ಮದೇ ಆದ ಒಂದು ವಿಶಿಷ್ಟ ಸ್ಥಾನ ಗಳಿಸಿರುವ ಸಾಹಿತಿ ಹಾಗೂ ಪತ್ರಕರ್ತ ಬನ್ನೂರು ಕೆ ರಾಜು ಅವರ ಜೀವಮಾನದ ಸಾಹಿತ್ಯ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟ ಹಾಗೂ ಜೆ.ಪಿ. ನಗರದ ಲಯನ್ಸ್ ಕ್ಲಬ್ ವತಿಯಿಂದ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.