ಐಫೋನ್​ ಮತ್ತು ಐಪ್ಯಾಡ್​​ ಬಳಕೆದಾರರೇ ಎಚ್ಚರ!

ದೆಹಲಿ: ಐಫೋನ್​ ಮತ್ತು ಐಪ್ಯಾಡ್​​ ಬಳಕೆದಾರರು ಓದಲೇಬೇಕಾದ ಸುದ್ದಿ ಇದು. CERT-In ಅಥವಾ ಇಂಡಿಯನ್​ ಕಂಪ್ಯೂಟರ್​ ಎಮರ್ಜೆನ್ಸಿ ರೆಸ್ಪಾನ್ಸ್​ ಟೀಮ್​ ಭಾರತೀಯ ಆ್ಯಪಲ್​ ಉತ್ಪನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಮಾರ್ಚ್​ 15ರಂದು CERT-In(Computer Emergency Response Team) ವೆಬ್​ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಆ್ಯಪಲ್​ ಐಒಎಸ್​ ಮತ್ತು ಐಪ್ಯಾಡ್ಒಎಸ್​​ನಲ್ಲಿ ದುರ್ಬಲತೆಯನ್ನು ಕಂಡುಹಿಡಿದಿದೆ. ಇದರಿಂದ ಡೇಟಾ ಖದೀಮರಿಗೆ ಅಥವಾ ಹ್ಯಾಕರ್ಸ್​ಗಳು ಸಿಸ್ಟಂ ನಿಯಂತ್ರಣವನ್ನು ಸಾಧಿಸಲು ಸಾಧ್ಯವಾಗುವ ಚಾನ್ಸ್​ ಇದೆ ಎಂದು ಹೇಳಿದೆ.

ಮಾತ್ರವಲ್ಲದೆ, ಸದ್ಯ ಕಂಡು ಬಂದಿರುವ ನ್ಯೂನತೆಯಿಂದ​ ಕಾರ್ಯನಿರ್ವಹಿಸದೇ ಇರಬಹುದು, ಅಥವಾ ಯಾವುದೋ ಕೋಡ್​ ಬಳಸಿ ಖಾಸಗಿ ಡೇಟಾವನ್ನು ಕದಿಯಬಹುದು ಎಂದು ಹೇಳಿದೆ.

ಮುಖ್ಯವಾಗಿ ಈ ದೋಷವು iOS ಮತ್ತು Ipads ವರ್ಷನ್​ 16.7.6 ಡಿವೈಸ್​ಗಳಾದ iPhone 8, iPhone8 plus, iPhone X, iPad 5th ಜನರೇಷನ್​, iPad Pro 9.7 ಇಂಚು ಮತ್ತು iPad Pro 12.9 ಇಂಚಿನ ಮೊದಲ ಜನರೇಷನ್​ಗಳಿಗೆ ಪರಿಣಾಮ ಬೀರಲಿದೆ.

ಹೀಗಾಗಿ ಐಫೋನ್​ ಬಳಕೆದಾರರು ಜಾಗರೂಕರಾಗಿರಿ ಎಂದು ಇಂಡಿಯನ್​ ಕಂಪ್ಯೂಟರ್​ ಎಮರ್ಜೆನ್ಸಿ ರೆಸ್ಪಾನ್ಸ್​ ಟೀಮ್​ ತನ್ನ ವೆಟ್​​ಸೈಟ್​ನಲ್ಲಿ ಮಾಹಿತಿ ಹಂಚಿಕೊಂಡಿದೆ.

 

Ashitha S

Recent Posts

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

8 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

23 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

55 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

59 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago