ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ

ಬೆಂಗಳೂರು: ಭಾರತದಲ್ಲಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟೊಯೊಟಾ ಇಂಡಿಯಾ ಕಂಪನಿಯು 3ನೇ ಕಾರು ಉತ್ಪದನಾ ಘಟಕ ತೆರೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಬೆಂಗಳೂರು ಹೊರವಲಯದ ಬಿಡದಿಯಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಮೂರನೇ ಘಟಕವನ್ನು ಸಹ ಬಿಡದಿ ಸನೀಹದಲ್ಲಿ ತೆರೆಯಲು ನಿರ್ಧರಿಸಿದೆ. ಹೊಸ ಘಟಕ ಸ್ಥಾಪನೆಗಾಗಿ ರೂ. 3,300 ಕೋಟಿ ಬಂಡವಾಳ ಹೂಡಿಕೆಗೆ ಸಿದ್ದವಾಗಿದ್ದು, ಇದರಿಂದ ಬರೋಬ್ಬರಿ 2 ಸಾವಿರ ಜನರಿಗೆ ಉದ್ಯೋಗ ಸೃಷ್ಠಿಯಾಗಲಿದೆ.

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಆರಂಭಿಸಿ 25 ವರ್ಷ ಪೂರೈಸಿರುವ ಟೊಯೊಟಾ ಕಂಪನಿಯು ಹಲವಾರು ಮಾರಾಟ ದಾಖಲೆಗಳನ್ನು ಸಾಧಿಸಿದ್ದು, ಇದೀಗ ಹೊಸ ಕಾರು ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 4 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಗುರಿಹೊಂದಿದೆ.

ಇದಲ್ಲದೆ ಭಾರತದಲ್ಲಿ ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಕರೊಲ್ಲಾ ಕ್ರಾಸ್ ಎಸ್ ಯುವಿ ಸೇರಿದಂತೆ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಇವು ಹಲವಾರು ವಿಶೇಷತೆಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago