ಕಾಸರಗೋಡು: ಜಿಲ್ಲೆಯ ನೀಲೇಶ್ವರದಲ್ಲಿ ನಡೆಯುತ್ತಿದ್ದ ತೆಯ್ಯಂ ಉತ್ಸವದ ವೇಳೆ ಸಂಭವಿಸಿದ ಅವಘಡದಲ್ಲಿ, ತೆಯ್ಯಂ ದೈವನರ್ತಕ ಕೈಯಲ್ಲಿದ್ದ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಒಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ.

ಈ ಘಟನೆ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಸಮೀಪದ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದ ವೇಳೆ, ಪೂಮಾರುತನ್ ದೇವರ ‘ವೆಲ್ಲಟ್ಟಂ’ ಆಚರಣೆಯ ಸಮಯದಲ್ಲಿ ನಡೆದಿದೆ. ಪ್ರದರ್ಶನದ ವೇಳೆ ತೆಯ್ಯಂ ಪ್ರದರ್ಶಕನು ಬಿರುಸಾಗಿ ಗುರಾಣಿಯನ್ನು ತಿರುಗಿಸುವ ಸಂದರ್ಭದಲ್ಲಿ, ಅಲ್ಲಿದ್ದ ಪ್ರೇಕ್ಷಕರಲ್ಲಿ ಒಬ್ಬ ಯುವಕನಿಗೆ ಅದು ತಲೆಗೆ ತಾಕಿದೆ.

ಗುರಾಣಿಯ ಹೊಡೆತದಿಂದ ಯುವಕ ತಕ್ಷಣವೇ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

https://x.com/greatandhranews/status/2000519650090635368?