ಉತ್ತರ ಪ್ರದೇಶ: ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಟಿ20 ವಿಶ್ವಕಪ್ ಭಾರತಕ್ಕೆ ಒಲಿಯಲಿ ಎಂಬುದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹಾರೈಕೆಯಾಗಿದೆ.
ಭಾರತ ತಂಡದ ಯಶಸ್ಸಿಗಾಗಿ ಅಭಿಮಾನಿಗಳು ಮತ್ತು ಕೆಲ ಸಾಧು ಸಂತರು ಉತ್ತರಪ್ರದೇಶದ ಪ್ರಯಾಗ್ ರಾಜ್ನಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಿಡಿಯೋ ಎಲ್ಲಡೆ ವೈರಲ್ ಆಗಿದೆ.
2013ರ ಬಳಿಕ ಭಾರತ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿಯಾದರೂ ಫೈನಲ್ನಲ್ಲಿ ಗೆದ್ದು ಭಾರತದ ಪ್ರಶಸ್ತಿ ಬರ ನೀಗಲಿ ಎನ್ನುವ ನಿಟ್ಟಿನಲ್ಲಿ ಪ್ರಯಾಗ್ ರಾಜ್ನಲ್ಲಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಸೇರಿ ತಂಡದ ಆಟಗಾರರ ಫೋಟೊವನ್ನು ಇರಿಸಿ ಪೂಜೆ, ಭಜನೆ ಮತ್ತು ಗಂಗಾ ಪೂಜೆ ನೆರವೇರಿಸಿ ಯಶಸ್ಸಿಗೆ ಪ್ರಾರ್ಥಿಸಿದ್ದಾರೆ.
https://x.com/ANI/status/1806888094248931468?
Ad