ಬೆಂಗಳೂರು: ವಾಲ್ಮಿಕಿ ಅಭಿವೃದ್ದಿ ನಿಗಮ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಬಹಳ ಚರ್ಚೆ ನಡೆಯುತ್ತಿದ್ದು ಆದಸಷಟು ಬೇಗ ರಾಜಿನಾಮೆ ನೀಡುವಂತೆ ಬಿಜೆಪಿ ಎಚ್ಚರಿಕೆ ನೀಡಿದೆ. ರಾಜೀನಾಮೆ ನೀಡದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
94 ಕೋಟಿಗೂ ಮಿಕ್ಕಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ರಾಜಭವನ ಚಲೋ ಹಮ್ಮಿಕೊಂಡಿತ್ತು.
ವಿಧಾನಸೌಧದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದ ಬಿಜೆಪಿ ನಾಯಕರು, ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದರು. ಅಲ್ಲದೇ ಬಿ ನಾಗೇಂದ್ರ ಅವರಿಂದ ಆದಷ್ಟು ಬೇಗನೆ ಸಿದ್ದರಾಮಯ್ಯ ರಾಜಿನಾಮೆ ಪಡೆಯಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
Ad