Showing 20 of 72 posts • Page 1 of 4
35 ನವಿಲುಗಳು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿದ ಘಟನೆ ತುಮಕೂರಿನ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನವಿಲುಗಳ ಸಾವುಗಳು ಸಂಭವಿಸಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಗರ ಹೊರವಲಯದ ಸತ್ಯಮಂಗಲ ಬಳಿಯ ಹಳೆಯ ಟೈರ್ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ಪ್ರಮಾಣದ ನಷ್ಟವಾಗಿದೆ.
ಓವರ್ಟೇಕ್ ಮಾಡುವ ವೇಳೆ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಬೈಪಾಸ್ ಬಳಿ ನಡೆದಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸಮಾನತೆಯ ಸಂದೇಶ ನೀಡಿದರೆ, ಕೆಂಪೇಗೌಡರು ಸರ್ವ ಜನಾಂಗಗಳನ್ನು ಒಗ್ಗೂಡಿಸಿ ನಾಡು ಕಟ್ಟಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಚಲನಚಿತ್ರ ನಟ ಜಗ್ಗೇಶ್ ಅಭಿಪ್ರಾಯಪಟ್ಟರು.
ಶ್ರೀ ವಿದ್ಯಾಚೌಡೇಶ್ವರಿ ಅಮ್ಮನವರ ವಾರ್ಷಿಕ ಮಹೋತ್ಸವವು ಏ.17 ರಿಂದ ಏ. 26 ರವರೆಗೆ ನಡೆಯಲಿದೆ ಎಂದು ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಹೇಳಿದರು.
ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ನಿವೃತ್ತಿ ಹೊಂದುವ ಮುನ್ನ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ತಮ್ಮ ಸಾವಿಗೆ ಮುನ್ನ ವೀಡಿಯೊ ರೆಕಾರ್ಡ್ ಮಾಡಿದ್ದು, ಹಿರಿಯ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.
ದಲಿತ ಮಹಿಳೆಗೆ ದೇವಾಲಯ ಪ್ರವೇಶ ಹಾಗೂ ಪೂಜೆ ಮಾಡಲು ನಿರಾಕರಿಸಿದ ಆರೋಪದಡಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಗಳರಪಾಳ್ಯದಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಬೆಂಚೆ ಗೇಟ್ ಬಳಿ ಚಿನ್ನದಂಗಡಿ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಪೊಲೀಸರು 12 ಗಂಟೆಯಲ್ಲಿ ಬಂಧಿಸಿ, ₹26 ಲಕ್ಷ ಮೌಲ್ಯದ ಚಿನ್ನ– ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.
ಹಾಡಹಗಲೇ ಚಿನ್ನದಂಗಡಿ ದರೋಡೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ.
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿ ನಡೆದಿದೆ.
ಕೇಂದ್ರ ಸರ್ಕಾರವು ಬಿಸಿಯೂಟ ನೌಕರರಿಗೆ ವೇತನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ತುಮಕೂರಿ
ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಬಂದಕುಂಟೆ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾದ ಜ್ಯೋತಿನಗರದಲ್ಲಿ ನಡೆದಿದೆ. ಪೃಥ್ವಿರಾಣಿ (20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ
ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ ಶ್ರೀಗಳ 118ನೇ ಜನ್ಮ ದಿನ ಹಿನ್ನೆಲೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ ಕಣ್ಮನ ಸೆಳೆಯುತ್ತಿದೆ. ತುಮಕೂರಿನ ಕ್ಯಾತಸಂದ್ರದ ಬಳಿಯ ಸಿದ್ದಗಂಗಾ ಮಠ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ, ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಘಟನೆ ಸಂಭವಿಸಿದೆ.