Showing 20 of 83 posts • Page 1 of 5
ಉಪಾಹಾರ ಸೇವಿಸಿದ ಬಳಿಕ 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಣೇಚಂದೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.
ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿನಿಮಾವನ್ನೇ ಮೀರಿಸಿದ ಇಲಿಯ ಕಳ್ಳತನದ ಕಹಾನಿ ತುಮಕೂರಿನಲ್ಲಿ ವೈರಲ್ ಆಗಿದೆ.
ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿಗೆ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರಪ್ರದೇಶದೊಂದಿಗೆ ಸುದೀರ್ಘ ಗಡಿಯನ್ನು ಹಂಚಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ.
ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮದ್ಯ ಸೇವಿಸಲು ಹಣ ನೀಡದ ಅಜ್ಜಿಯನ್ನು ಮೊಮ್ಮಗ ರೊಟ್ಟಿ ತಯಾರಿಸುವ ಹೆಂಚಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಗೌಡೇಟಿ ಗ್ರಾಮದಲ್ಲಿ ನಡೆದಿದೆ.
ಗೌರಿಬಿದನೂರಿನಿಂದ ಮಧುಗಿರಿ ಕಡೆಗೆ ಸಂಚರಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಶಾಲೆಯ ಕಾಂಪೌಂಡ್ಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿ ಕ್ರಾಸ್ನಲ್ಲಿ ತಡರಾತ್ರಿ ಸಂಭವಿಸಿದೆ.
ತೀವ್ರ ಎದೆ ನೋವಿನಿಂದ ಎಎಸ್ಐ ಸಾವನ್ನಪ್ಪಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.
ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ನಡೆದಿದೆ.
ವಾಕಿಂಗ್ಗೆಂದು ತೆರಳಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ.
ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಜಿ.ಪರಮೇಶ್ವರ ಅವರು, ತಮ್ಮ ರಾಜಕೀಯ ಜೀವನ ನಡೆದು ಬಂದ ಹಾದಿ ನೆನೆದು ಇಲ್ಲಿ ಭಾವುಕರಾದರು.
35 ನವಿಲುಗಳು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿದ ಘಟನೆ ತುಮಕೂರಿನ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನವಿಲುಗಳ ಸಾವುಗಳು ಸಂಭವಿಸಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಗರ ಹೊರವಲಯದ ಸತ್ಯಮಂಗಲ ಬಳಿಯ ಹಳೆಯ ಟೈರ್ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ಪ್ರಮಾಣದ ನಷ್ಟವಾಗಿದೆ.
ಓವರ್ಟೇಕ್ ಮಾಡುವ ವೇಳೆ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಬೈಪಾಸ್ ಬಳಿ ನಡೆದಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸಮಾನತೆಯ ಸಂದೇಶ ನೀಡಿದರೆ, ಕೆಂಪೇಗೌಡರು ಸರ್ವ ಜನಾಂಗಗಳನ್ನು ಒಗ್ಗೂಡಿಸಿ ನಾಡು ಕಟ್ಟಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಚಲನಚಿತ್ರ ನಟ ಜಗ್ಗೇಶ್ ಅಭಿಪ್ರಾಯಪಟ್ಟರು.
ಶ್ರೀ ವಿದ್ಯಾಚೌಡೇಶ್ವರಿ ಅಮ್ಮನವರ ವಾರ್ಷಿಕ ಮಹೋತ್ಸವವು ಏ.17 ರಿಂದ ಏ. 26 ರವರೆಗೆ ನಡೆಯಲಿದೆ ಎಂದು ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಹೇಳಿದರು.
ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ನಿವೃತ್ತಿ ಹೊಂದುವ ಮುನ್ನ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ತಮ್ಮ ಸಾವಿಗೆ ಮುನ್ನ ವೀಡಿಯೊ ರೆಕಾರ್ಡ್ ಮಾಡಿದ್ದು, ಹಿರಿಯ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.
ದಲಿತ ಮಹಿಳೆಗೆ ದೇವಾಲಯ ಪ್ರವೇಶ ಹಾಗೂ ಪೂಜೆ ಮಾಡಲು ನಿರಾಕರಿಸಿದ ಆರೋಪದಡಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಗಳರಪಾಳ್ಯದಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಬೆಂಚೆ ಗೇಟ್ ಬಳಿ ಚಿನ್ನದಂಗಡಿ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಪೊಲೀಸರು 12 ಗಂಟೆಯಲ್ಲಿ ಬಂಧಿಸಿ, ₹26 ಲಕ್ಷ ಮೌಲ್ಯದ ಚಿನ್ನ– ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.