ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಷ್ಟದ ಅಂದಾಜು ಪರಿಶೀಲಿಸಿದ ಬಳಿಕ ಪರಿಹಾರಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಉಡುಪಿಗೆ ಹೊಸ ತಂತ್ರಜ್ಞಾನದ ಅಗ್ನಿಶಾಮಕ ವಾಹನ ಪೊರೈಸಲು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುತ್ತದೆ. ಅದರ ಜೊತೆಗೆ ಜಿಲ್ಲೆಯಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಹೆಚ್ಚಿಸುವಂತೆ ಆಗ್ರಹ ಪಡಿಸಲಾಗುತ್ತದೆ ಎಂದರು.