Showing 20 of 2867 posts • Page 10 of 144
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ಕೊಡವೂರು ಶಂಕರನಾರಯಾಣ ದೇಗುಲದ ವಸಂತ ಮಂಟಪದ ನಡೆಯಿತು.
ಬೈಂದೂರು ಶಿರೂರು ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ನಲ್ಲಿ ಚಮತ್ಕಾರಗೊಂಡಿದ್ದು, 35% ನಿಂದ ನೇರವಾಗಿ 94% ಫಲಿತಾಂಶಕ್ಕೆ ಭಾರೀ ಜಿಗಿತಗೊಂಡಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರನ್ನು ಶ್ರೀಕೃಷ್ಣಮಠಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯ ಕಾಳಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೋಡು ಶ್ರೀ ಕುಮಾರಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ವಾರಾಹಿ ಕಾಲುವೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮೇ 3ರಂದು ಸಂಜೆ 4ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಉಡುಪಿಯಲ್ಲಿ ನಾರಿ ಶಕ್ತಿ ಫೋರಂ ನವರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾರಿ ಶಕ್ತಿ ವಂದನ ಅಧಿನಿಯಮವನ್ನು ಜಾರಿಯಾಗದಂತೆ ತಡೆಹಿಡಿದ ಕೇಂದ್ರದ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ. ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ರಾಜ್ಯಕ್ಕೆ ಉಡುಪಿಯ ಶಂಕರನಾರಾಯಣದ ವಿದ್ಯಾರ್ಥಿ ಪ್ರೀತಂ ಪೂಜಾರಿ ಟಾಪರ್ ಆಗಿದ್ದಾರೆ. ಶಂಕರನಾರಾಯಣದ ಮದರ್ ತೆರಸ ಮೆಮೋರಿಯಲ್ ಶಾಲೆ ವಿದ್ಯಾರ್ಥಿಯಾಗಿದ್ದು, 620 ಅಂಕ ಬರಬಹುದು ಎಂದು ಭಾವಿಸಿದ್ದೆ. ಟಾಪರ್ ಆಗುತ್ತೇನೆ ಅನ್ನೋ ಭರವಸೆ ಇತ್ತು. ಆದರೆ 625 ಅಂಕ ನಿರೀಕ್ಷಿಸಿರಲಿಲ್ಲ ಎಂದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರಕಾರವು ಮಹಿಳಾ ಮಸೂದೆಯನ್ನು ನೆಪವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಅನ್ನು ಜಾರಿಗೆ ತರಲು ಹೊರಟಿತ್ತು.
ರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಹಿತ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ “ದೇಶಾಭಿಮಾನಿ ಸಮಾವೇಶ” ವನ್ನು ಇದೇ ಎ.26ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.
ಮಹಿಳೆಯರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಾರಿಗೊಳಿಸಲು ಮುಂದಾಗಿದ್ದ ‘ನಾರಿ ಶಕ್ತಿ ವಂದನ್ ಕಾಯ್ದೆಯ ತಿದ್ದುಪಡಿ ಮಸೂದೆ’ ಅನ್ನು ವಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳಾ ವಿರೋಧಿ ಧೋರಣೆ ತೋರಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು.
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಉದ್ಘಾಟಿಸಲಾಯಿತು.