Showing 20 of 3077 posts • Page 10 of 154
ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಉದ್ಯಾವರ ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆಯಾಗಿದ್ದು, ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮೆಸ್ಕಾಂ ಜಾಗೃತ ದಳದ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯಕುಮಾರ್ ಅವರನ್ನು ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ‘ಡಿಜಿ-ಐಜಿಪಿ ಪ್ರಶಂಸನಾ ಪದಕ’ಕ್ಕೆ ಆಯ್ಕೆ ಮಾಡಲಾಗಿದೆ.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ.
ಉಡುಪಿ: ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ವೈದ್ಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಕಾಮತ್ ನರ್ಸಿಂಗ್ ಹೋಮ್ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76), ಸಂತೆಕಟ್ಟೆ ನೇಜಾರಿನ ಎಸ್. ಪ್ರಕಾಶ್ (50), ಕಾರ್ಕಳದ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆಯ ಸುಪ್ರೀತಿ (22) ಬಂಧಿತರು. ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಮಕ್ಕಳ ರಕ್ಷಣಾ […]
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಮತ್ತು ವೆಬ್ಸೈಟ್ ಅನಾವರಣ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.
ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ.
ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ನಲ್ಲಿರುವ ಹಣ್ಣು–ಹಂಪಲು ಸಂಗ್ರಹ ಅಂಗಡಿಗೆ ಭಾನುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.
12ನೇ ವಿಶ್ವ ಯೋಗ ದಿನವನ್ನು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಉಡುಪಿ ಕೃಷ್ಣ ಮಠ, ಶಿರೂರು ಮಠ ಹಾಗೂ ಪತಂಜಲಿ ಯೋಗ ಪೀಠದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಯೋಗಪಟುಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು.
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಮುಳ್ಳುಹಂದಿಯೊಂದನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ನಗರದ ಚಿತ್ಪಾಡಿಯ ಶ್ರೀನಿವಾಸನಗರದಲ್ಲಿ ನಡೆದಿದೆ.
ನಗರದ ಕಿನ್ನಿಮೂಲ್ಕಿ ಅಗ್ನಿಶಾಮಕ ದಳ ರಸ್ತೆಯ ಪಕ್ಕದಲ್ಲಿ ಹಲವು ವರ್ಷಗಳಿಂದ ಅಂಚೆ ಪೆಟ್ಟಿಗೆಯೊಂದು ಅನಾಥವಾಗಿ ಬಿದ್ದಿದ್ದು, ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬ ಜಾಗರೂಕರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು.
ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕರಾವಳಿಯಲ್ಲಿ ಮುಂಗಾರು ಪ್ರವೇಶಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವುದು ನಾಡದೋಣಿ ಮೀನುಗಾರರ ಆತಂಕ ಹೆಚ್ಚಿಸಿದೆ.
ಬಸ್ ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.