Showing 20 of 3087 posts • Page 128 of 155
ದೇವರ ಹೆಸರಿನಲ್ಲಿ ಜನರನ್ನು ವಂಚಿಸಿ ಶಾಸಕರಾಗಿರುವುದು ಇಡೀ ಜಗತ್ತಿನಲ್ಲಿ ಸುನೀಲ್ ಕುಮಾರ್ ಒಬ್ಬರೇ. ಇವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಬೇಕು.
ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ.
ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee (ಭವಾನಿ) ಲಾಡ್ಜಿಂಗ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಮಣಿಪಾಲ-ಪೆರಂಪಳ್ಳಿ ರಸ್ತೆಯ ಕಟ್ಟಡ ಸಂಖ್ಯೆ 2-7E, E1, E2, E3, E4, E5ರಲ್ಲಿ ಶಾಂಭವಿ ಅಸೋಸಿಯೇಟ್ಸ್ ನ 7th Heaven (Ecstays) ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಉದ್ದಿಮೆ ಪರವಾನಿಗೆಯನ್ನು ನಗರಸಭೆ ರದ್ದುಪಡಿಸಿದೆ.
ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಕಿವುಡರ ಕ್ಷೇಮಾಭಿವೃದ್ಧಿ ಸಂಘದ 10ನೇ ವರ್ಷದ ಸಂಭ್ರಮ ಕಾರ್ಯಕ್ರಮ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ಇಂದು ನಡೆಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಲಯನ್ಸ್, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ನ.9ರಂದು ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ “ನನ್ನ ನಾಡು ನನ್ನ ಹಾಡು” ಎಂಬ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಕೆಮ್ಮಣ್ಣು ಹೇಳಿದರು.
ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಪ್ರತಿಭಟನೆ ನಡೆಸುವುದು ಕೇವಲ ಪ್ರಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ (ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು,
ಉಡುಪಿ ಜಿಲ್ಲೆಯಲ್ಲಿ 3 ಸಾವಿರ ರೂ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ರೈತರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಸಂಗೀತ ಸಭಾದ ವತಿಯಿಂದ ಪದ್ಮ ಭೂಷಣ ಪುರಸ್ಕೃತ ಪಂಡಿತ್ ರಾಜನ್ ಮಿಶ್ರಾಜೀ ಅವರ ಸ್ಮರಣೆಯ ಅಂಗವಾಗಿ ಇದೇ ಅಕ್ಟೋಬರ್ 28ರಂದು ಸಂಜೆ 5.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಗೀತಾ ಸಭಾದ ಅಧ್ಯಕ್ಷ ರಂಗ ಪೈ ತಿಳಿಸಿದರು.
ಲೊಂಬಾರ್ಡ್ ಆಸ್ಪತ್ರೆಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ಸ್ ಕ್ಲಬ್ನ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಲೊಂಬಾರ್ಡ್ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡುವ ಧೈಯದೊಂದಿಗೆ “ಉಡುಪಿ ಮ್ಯಾರಥಾನ್-2024” ನ್ನು ಡಿಸೆಂಬರ್ 1ರಂದು ಮಲ್ಪೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತ್ತನ್ನ ಹೇಳಿದರು.
ಅಂಗವಿಕಲರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇದೇ ಅ. 28ರಂದು 9.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ
ಮಂಗಳಮುಖಿಯರ ಉಪಟಳ ಕುರಿತು ಸಾರ್ವಜನಿಕರ ದೂರು ನೀಡಿದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ರಾತ್ರೋರಾತ್ರಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದರು.
ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದರ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕುಂದಾಪುರ ಹೊರವಲಯದಲ್ಲಿರುವ ಹಂಗಳೂರು ಸಮೀಪದ ಬ್ರಹ್ಮಗುಡಿ ಎಂಬಲ್ಲಿ ನಡೆದಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ) 2024ರ ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF)ಕ್ಕೆ ಅಧಿಕೃತವಾಗಿ ಆಯ್ಕೆಗೊಂಡಿದೆ.
ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ನಡೆಯುತ್ತಿದೆ. ಪತಂಜಲಿ ಯೋಗ ಪೀಠದ ಯೋಗ ಗುರು ಸ್ವಾಮಿ ರಾಮದೇವ್ ಮಹಾರಾಜ್ ಮೂರು ದಿನಗಳ ಈ ಸಮ್ಮೇಳನ ಉದ್ಘಾಟನೆ ಮಾಡಿದರು.
ಕೇಂದ್ರೀಯ ಕಾರ್ಮಿಕ ಸಂಘಟನೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ನ ಕರ್ನಾಟಕ ರಾಜ್ಯ ಸಮಿತಿಯು ಅ. 26 ಮತ್ತು 27ರಂದು ಮೈಸೂರಿನಲ್ಲಿ ಎರಡು ದಿನಗಳ ಕಾಲ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವನ್ನು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದ್ದಾರೆ.