Showing 20 of 3093 posts • Page 129 of 155
ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದರ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕುಂದಾಪುರ ಹೊರವಲಯದಲ್ಲಿರುವ ಹಂಗಳೂರು ಸಮೀಪದ ಬ್ರಹ್ಮಗುಡಿ ಎಂಬಲ್ಲಿ ನಡೆದಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ) 2024ರ ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF)ಕ್ಕೆ ಅಧಿಕೃತವಾಗಿ ಆಯ್ಕೆಗೊಂಡಿದೆ.
ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ ನಡೆಯುತ್ತಿದೆ. ಪತಂಜಲಿ ಯೋಗ ಪೀಠದ ಯೋಗ ಗುರು ಸ್ವಾಮಿ ರಾಮದೇವ್ ಮಹಾರಾಜ್ ಮೂರು ದಿನಗಳ ಈ ಸಮ್ಮೇಳನ ಉದ್ಘಾಟನೆ ಮಾಡಿದರು.
ಕೇಂದ್ರೀಯ ಕಾರ್ಮಿಕ ಸಂಘಟನೆ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ನ ಕರ್ನಾಟಕ ರಾಜ್ಯ ಸಮಿತಿಯು ಅ. 26 ಮತ್ತು 27ರಂದು ಮೈಸೂರಿನಲ್ಲಿ ಎರಡು ದಿನಗಳ ಕಾಲ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವನ್ನು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದ್ದಾರೆ.
ಉಡುಪಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು 13 ಮಂದಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ […]
ಮನೆಯ ಹಂಚಿನ ನಡುವೆ ಅಡಗಿ ಕುಳಿತ ಹೆಬ್ಬಾವನ್ನು ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಲಾಗಿದೆ.
ಕೆನಾರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಹಿಂಭಾಗದ ರಿಟೇಲ್ ಅಸೆಟ್ ಹಬ್ ನಲ್ಲಿ “ಕೆನರಾ ರಿಟೈಲ್ ಮೇಳ-2024” ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನ ಉಡುಪಿ ಪ್ರಾದೇಶಿಕ ವಲಯದ ಮ್ಯಾನೇಜರ್ ಕೌಶಿಕ್ ರೆಡ್ಡಿ ತಿಳಿಸಿದರು.
ಭಾರೀ ವಿವಾದಕ್ಕೀಡಾಗಿರುವ ಇಂದ್ರಾಳಿ ಬ್ರಿಡ್ಜ್ ಕಾಮಗಾರಿ ಅವ್ಯವಸ್ಥೆಯ ವಿರುದ್ದ ಹೋರಾಟ ಸಮಿತಿ ಪ್ರತಿಭಟನೆಗೆ ಸಜ್ಜುಗೊಳ್ಳುತ್ತಿದ್ದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಅವರು ಕಾಮಗಾರಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಅಚ್ಲಾಡಿಯ ಇ.ಸಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ತಡೆಹಿಡಿದ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ “ಶತಾಭಿವಂದನಂ’ ಸಮಾರೋಪ ಸಂಭ್ರಮವು ಅ. 27ರ ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ. ಸತೀಶ್ ಶೆಟ್ಟಿ ತಿಳಿಸಿದರು.
ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಲವಂತವಾಗಿ ಕಾರಿನಿಂದ ಹೊರಕ್ಕೆ ತಳ್ಳಲ್ಪಟ್ಟಿದ್ದ ಮಹಿಳೆಯನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅವರು ಸಾರ್ವಜನಿಕರು ಮತ್ತು ಮಹಿಳಾ ಪೊಲೀಸ್ ಅಧಿಕಾರಿಗಳ ಸಹಾಯದಿಂದ ರಕ್ಷಿಸಿದ್ದಾರೆ.
ಕರ್ನಾಟಕ ಸ್ಟೇಟ್ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್ಎಸ್ಸಿಎ) ವತಿಯಿಂದ ನ.1ರಿಂದ ಡಿ. 1ರವರೆಗೆ ಬೆಂಗಳೂರಿನ ಆಚಾರ್ಯ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್(ಕೆಎಸ್ಪಿಎಲ್) ಕ್ರಿಕೆಟ್ ಟೂರ್ನ್ ಮೆಂಟ್ ನಲ್ಲಿ ‘ಉಡುಪಿ ವಾರಿಯರ್’ ಕ್ರಿಕೆಟ್ ತಂಡ ಭಾಗವಹಿಸಲಿದೆ ಎಂದು ಕ್ರಿಕೆಟ್ ತಂಡದ ಮಾಲೀಕ ಸಂತೋಷ್ ಕುಮಾರ್ ತಿಳಿಸಿದರು.
ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ
ಹುತಾತ್ಮರ ತ್ಯಾಗ ಮತ್ತು ಬಲಿದಾನಗಳು ನಮ್ಮ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ ಎಸ್ ಗಂಗಣ್ಣನವರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.