Showing 20 of 3077 posts • Page 13 of 154
ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದೆ. ಕೇರಳ ಪ್ರವೇಶಿಸಿದ್ದ ಮುಂಗಾರು ಇದೀಗ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲು ಆರಂಭಿಸಿದೆ.
ಕೆಲವು ವರ್ಷಗಳ ಹಿಂದೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಯಾತ್ರಿಕರ ಮೃತದೇಹವನ್ನು ಭಾರಿ ಮಳೆಯ ನಡುವೆಯೂ ಹರಸಾಹಸ ಪಟ್ಟು ಮೇಲಕ್ಕೆತ್ತಿ ತಂದು ರಾಜ್ಯ ಸರಕಾರದ ಗಮನ ಸೆಳೆದು ಮುಖ್ಯಮಂತ್ರಿ ಪದಕ್ಕ ಪಡೆದಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಇದೀಗ ಮತ್ತೊಂದು ಸಾಹಸ ಕಾರ್ಯದ ಮೂಲಕ ವ್ಯಕ್ತಿಯ ಜೀವ ಉಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದ ದನವೊಂದನ್ನು ಸ್ಥಳೀಯರು ಹಾಗೂ ಕ್ರೇನ್ ಚಾಲಕರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಶುಕ್ರವಾರ ಹೊಸಂಗಡಿ ಗ್ರಾಮದ ಅಂಬೂರು ಪ್ರದೇಶದಲ್ಲಿ ನಡೆದಿದೆ.
ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಮಾಲಕತ್ವದ ಬಿಆರ್ಎಸ್ ಲೈಫ್ ಗ್ರೂಪ್ ದುಬೈ ಶೈಲಿಯಲ್ಲಿ ನಿರ್ಮಿಸಿದ್ದ ಆರು ಮಹಡಿಯ ಸರ್ವಸುಸಜ್ಜಿತ ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣೆ ಇದೀಗ ಸರಕಾರಕ್ಕೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ.
ಮಟ್ಟು ಗ್ರಾಮದ ಹೆಮ್ಮೆ, ರೈತರ ಭಾವನೆ ಹಾಗೂ ವಿಶ್ವಪ್ರಸಿದ್ಧ ಮಟ್ಟುಗುಳ್ಳದ ಪ್ರತೀಕವಾಗಿದ್ದ ಪ್ರತಿಕೃತಿಯನ್ನು ಇತ್ತೀಚೆಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.
ಮಹೇಶ್ ಮರ್ಣೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕಲಾವಿದ. ಅಶ್ವಥ ಎಲೆಯಲ್ಲಿ ಭಾವಚಿತ್ರ ಮೂಡಿಸುವುದರಲ್ಲಿ ಇವರು ಎತ್ತಿದ ಕೈ. ಅನೇಕ ಗಣ್ಯರು ಮತ್ತು ರಾಜಕೀಯ ನಾಯಕರ ಭಾವಚಿತ್ರಗಳನ್ನು ಎಲೆಯಲ್ಲಿ ಮೂಡಿಸಿ ಸೈ ಎನಿಸಿದ್ದಾರೆ.
ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ಸಂಘಟನಾ ಕೌಶಲ್ಯದ ಮೂಲಕ ಜಿಲ್ಲೆಯಾದ್ಯಂತ ಗುರುತಿಸಿಕೊಂಡಿರುವ ಲಯನ್ ಲೂಯಿಸ್ ಲೋಬೊ ಅವರು ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಸಿ ಇದರ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೂಕ್ತ ನಿರ್ವಹಣೆಯ ಕೊರತೆಯ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಬುಧವಾರ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪ್ರಮುಖ ಸರ್ಕಲ್ನಲ್ಲಿ ಜೂನ್ 2ರ ಮಂಗಳವಾರ ರಾತ್ರಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಳೆಗಾಲದಲ್ಲಿ ಜೂ.1ರಿಂದ ಜು.31ರವರೆಗೆ ಒಟ್ಟು ಎರಡು ತಿಂಗಳ ಕಾಲ ಸಮುದ್ರದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಇದೀಗ ನೂರಾರು ಬೋಟುಗಳು ಲಂಗರು ಹಾಕಿವೆ.
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್ ಬಳಿ ಸಂಭವಿಸಿದೆ.
ಹೆಬ್ರಿಯ ಅನಂತನಗರದಲ್ಲಿರುವ ಉದ್ಯಮಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.