Showing 20 of 3077 posts • Page 14 of 154
ಜಿಲ್ಲೆಯ ಗ್ರಾಮೀಣ ಭಾಗದ ನಿರ್ಜನ ಪ್ರದೇಶವೊಂದರಲ್ಲಿ ಹಸುವಿನ ರುಂಡ ಪತ್ತೆಯಾಗಿದೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ.
ನದಿ ತೀರದಲ್ಲಿ ಹಸುವಿನ ರುಂಡಪತ್ತೆಯಾಗಿರುವ ಘಟನೆ ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಎಂಬಲ್ಲಿ ನಡೆದಿದೆ. ನದಿ ತೀರದ ಪ್ರದೇಶದಲ್ಲಿ ಪತ್ತೆಯಾಗಿದೆ.
ಬೇಸಿಗೆ ರಜೆ ಬಳಿಕ ರಾಜ್ಯದಾದ್ಯಂತ ಸೋಮವಾರ ಶಾಲೆಗಳು ಪುನರಾರಂಭಗೊಂಡಿದ್ದು, ಉಡುಪಿ ಜಿಲ್ಲೆಯ ಶಾಲೆಗಳಲ್ಲೂ ಹೊಸ ಶೈಕ್ಷಣಿಕ ವರ್ಷದ ಆರಂಭ ಸಂಭ್ರಮ–ಸಡಗರದಿಂದ ನಡೆಯಿತು.
ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ 28 ಮೇ 2026 ರಂದು ಸಂಜೆ 6:00 ಗಂಟೆಗೆ ಯರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ನಲ್ಲಿ “ಇಂಪ್ರಿಂಟ್ಸ್ ಅಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮವನ್ನು ಅಯೋಹಿಸಲಾಗಿತ್ತು.
ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿತು.
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕನ್ನಡ ಚಿತ್ರರಂಗದ ತಾರಾ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಮೂಡುಬಗೆ ಬಳಿಯ ಬಾಳ್ಕಟ್ಟು ಸೇತುವೆ ಬಳಿ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬಸವ ನಾಯ್ಕ (80) ಮೃತಪಟ್ಟರು.
ನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು.
ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸ್ಥಾಪಿಸಿರುವ ಸುಶಾನ್ ಟ್ರಸ್ಟ್ ಕೊಡ್ಲಾಡಿ ಇದರ ವತಿಯಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ ಹಾಗು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮೇ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಸಂಚಾಲಕ ಕಿರಣ್ ಶೆಟ್ಟಿ ಕೊಡ್ಲಾಡಿ ತಿಳಿಸಿದ್ದಾರೆ.
ಎಂಸಿಸಿ ಬ್ಯಾಂಕ್ನ ಸಂತೇಕಟ್ಟೆ ಶಾಖೆಯು ಪ್ರಾರಂಭವಾದ ಕೇವಲ ಏಳು ತಿಂಗಳ ಅವಧಿಯಲ್ಲೇ ₹10 ಕೋಟಿ ವ್ಯವಹಾರ ವಹಿವಾಟು ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗುತ್ತಿರುವ ಬಗ್ಗೆ ಭೋವಿ ಯುವ ಮುಖಾಂಡ ಹೋರಾಟಕ್ಕೆ ಇಳಿದಿದ್ದು ಈ ಸಮಸ್ಯೆಯ ಮಾನವೀಯ ಮೇರೆಗೆ ಜಿಲ್ಲೆಗೆ 3 ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದು ಕಾರಣಾಂತರಗಳಿಂದ ಪ್ರವಾಸ ರದ್ದು ಆಗಿರುತ್ತದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಳವಡಿಸಲಾಗಿರುವ ಆರು ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಕಳೆದ ಒಂದು ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 46,753 ವಾಹನಗಳನ್ನು ಪತ್ತೆ ಹಚ್ಚಿವೆ.
ನೂತನ ಮಂತ್ರಿಮಂಡಲದಲ್ಲಿ ಎಂಎಲ್ ಸಿ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಪಡಿಸಿದೆ.
ಮಳೆಗಾಲದ ಪೂರ್ವ ತಯಾರಿ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳುವಲ್ಲಿ ಉಡುಪಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಆರೋಪಿಸಿದರು.
ಉಜ್ಜಯಿನಿ ರಾಜಮನೆತನವನ್ನು ಐತಿಹಾಸಿಕ ನವರತ್ನಗಳಲ್ಲಿ ಅಲಂಕರಿಸಿದ ಪೌರಾಣಿಕ ಖಗೋಳಶಾಸ್ತ್ರಜ್ಞ, ಜ್ಯೋತಿಷಿಯ ಜೀವನಾಧಾರಿತ “ವರಾಹ ಮಿಹಿರನ್” ಕಥಕ್ಕಳಿ ಪ್ರದರ್ಶನವು ಜೂನ್ 10ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದರು.