Showing 20 of 2867 posts • Page 14 of 144
ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಬೆಳಿಗ್ಗೆ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವವು ದೇಗುಲದ ತಂತ್ರಿ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆ ನೇತೃತ್ವದಲ್ಲಿ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಸಹಿತ ಋುತ್ವಿಜರ ಪೌರೋಹಿತ್ಯದೊಂದಿಗೆ ನಡೆಯಿತು.
ಉಡುಪಿಯ ಸಿಎಸ್ಐ ಲೊಂಬಾರ್ಡ್ ಮೆಮೋ ರಿಯಲ್(ಮಿಷನ್) ಆಸ್ಪತ್ರೆಯ ಪೂರ್ಣ ಪ್ರಮಾಣದ ಮೊದಲ ಆರೋಗ್ಯ ಕೇಂದ್ರ(ಪಾಲಿ ಕ್ಲಿನಿಕ್) ಕಟಪಾಡಿಯ ಬಸ್ ನಿಲ್ದಾಣದ ಬಳಿ ಶನಿವಾರ ಉದ್ಘಾಟನೆಗೊಂಡಿತು.
ಸರಳಬೆಟ್ಟುವಿನ ಉಮಾಮಹೇಶ್ವರಿ ದೇವಸ್ಥಾನದ ಪಕ್ಕದ ಮನೆಯೊಂದರಲ್ಲಿ ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾ ದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಖ್ಯಾತ ಗಾಯಕ ಯಶವಂತ್ ಎಂ.ಜಿ ಅವರ ಕಂಠದಿಂದ ಮೂಡಿಬಂದಿರುವ “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ ಹಾಗೂ ಶ್ರೀಮದ್ಭಾಗವತ ಸಪ್ತಾಹ ಮಹೋತ್ಸವ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ ನೆರವೇರಿತು.
ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು.
ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ(ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದ ಯಕ್ಷಗಾನ ಸೇವೆಯ ವೇಳೆ ಮಹಿಷಾಸುರನ ಪಾತ್ರಧಾರಿ ತೋರಿದ ಅತಿರೇಕದ ಆವೇಶ ಈಗ ವಿವಾದಕ್ಕೆ ಕಾರಣವಾಗಿದೆ.
ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.
ಸುದೀಪ್ ರೈ ಆಸ್ಪತ್ರೆಯಲ್ಲೇ ಪೊಲೀಸರ ಮುಂದೆಯೇ ‘ವೈಯಕ್ತಿಕ ಕಾರಣದಿಂದ ನಾನೇ ಸ್ವ ಇಚ್ಛೆಯಿಂದ ವಿಷ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಆದರೆ ಸುದೀಪ್ ರೈ ತಂದೆ ಮತ್ತು ವೇಣುಗೋಪಾಲ ಶೆಟ್ಟಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು. ನನ್ನ ವಿರುದ್ಧ ಕೇಳಿಬರುತ್ತಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ನನ್ನ ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶದಿಂದ ಮಾಡುತ್ತಿರುವ ಆರೋಪ ಎಂದು ಸುದೀಪ್ ರೈ ಪತ್ನಿ ನಟಿ ಸೌಮ್ಯ ಶೆಟ್ಟಿ ಹೇಳಿದ್ದಾರೆ.
ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣವು ಉಡುಪಿ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನ ಸಮೀಪದಲ್ಲಿರುವ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು ಹಾಗೂ ನಾಗ ದೇವರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಎ. 3ರಿಂದ ಎ. 7ರ ವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಬುಧವಾರ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
ಸಹಜವಾಗಿ ದನಗಳಿಗೆ ನಾಲ್ಕು ಕೆಚ್ಚಲುಗಳು ಇರುವುದೇ ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಪರ್ಕಳದ ಅಚ್ಯುತ ನಗರದಲ್ಲಿ ಅಪರೂಪದ ಐದು ಕೆಚ್ಚಲಿನ ದನವೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ (ಕೆಎಂಸಿ)ಯಲ್ಲಿ ಮೊದಲ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ದೀರ್ಘಕಾಲದ ಯಕೃತ್ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಗೆ, ಮೃತ ದಾನಿ ಕಸಿ ಕಾರ್ಯಕ್ರಮದಡಿಯಲ್ಲಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಣಿಪಾಲ ಮಾಹೆಯ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್ ಕಂಟಿಪುಡಿ ಹೇಳಿದರು.
ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.