Showing 20 of 3077 posts • Page 15 of 154
ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ.
: ಕೃಷಿ ಪರಂಪರೆ ಮತ್ತು ದೇಶೀ ಭತ್ತದ ತಳಿಗಳ ಸಂರಕ್ಷಣೆಗೆ ಉತ್ತೇಜನ ನೀಡುವಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠ ಮತ್ತು ಕೃಷಿ ಪ್ರಯೋಗ ಪರಿವಾರ ಸಂಸ್ಥೆಗಳ ಆಶ್ರಯದಲ್ಲಿ ನಾಳೆ (ಮೇ 28) ‘ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದ ಸುತ್ತಿಕೊಂಡಿದೆ. ಚೌಧರಿ ಮಾಜಿ ರೌಡಿಶೀಟರ್ಗೆ ಆಶೀರ್ವಾದ ಮಾಡುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮುಂಗಾರು ಪೂರ್ವಾವಸ್ಥೆಯಲ್ಲೇ ಕರಾವಳಿಯಲ್ಲಿ ಕಡಲಿನ ಅಲೆಗಳ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮೇ 15ರಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ.
ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್ ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ವತಿಯಿಂದ ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗ ಹಾಗೂ ಸ್ವಾವಲಂಬನೆ ಕಲ್ಪಿಸುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ನ ಉದ್ಘಾಟನಾ ಸಮಾರಂಭವು ಸಂಸ್ಥೆಯ ಕ್ಯಾಂಪಸ್ ನಲ್ಲಿ ನಡೆಯಿತು.
ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಕೊಲ್ಲೂರು ಸಮೀಪದ ದಳಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳಾ ಯಾತ್ರಾರ್ಥಿಯೊಬ್ಬರ ಮೈಮೇಲಿದ್ದ ಚಿನ್ನಾಭರಣ ಕಳವು ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಟ್ಕಳ ಕಪ್ಪೆ ಚಿಪ್ಪು ದುರಂತ ಪ್ರಕರಣ ನಡೆದಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಾದೇವಿ ನಾಯ್ಕ್ ಹೇಳಿಕೆ ನೀಡಿದ್ದಾರೆ.
ಭಟ್ಕಳ ಕಪ್ಪೆಚಿಪ್ಪು ದುರಂತ ಪ್ರಕರಣ ನಡೆದಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.
ಭಟ್ಕಳ ಕಪ್ಪೆ ಚಿಪ್ಪು ದುರಂತ ಪ್ರಕರಣ ನಡೆದಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಹಾಗೂ ನಾಗರತ್ನ ಈಶ್ವರ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿದರು.
ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ನಗರದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲಕನಿಗೆ ಚಾಕು ತೋರಿಸಿ ಹಲ್ಲೆ ನಡೆಸಲಾಗಿದೆ. ಪೂಜಾ ಬೇಕರಿ ಮಾಲಕ ಮುರಳಿಧರ ಹಲ್ಲೆಗೆ ಒಳಗಾದವರು.
ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರುವಿನಲ್ಲಿ ನಡೆದಿದೆ.
ಮಟ್ಟು ಗ್ರಾಮಕ್ಕೆ ಸ್ವಾಗತ ಕೋರುವ ಮಟ್ಟುಗುಳ್ಳದ ಪ್ರತಿಕೃತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ನಗರದ ಹೃದಯ ಭಾಗದಲ್ಲೇ ವರ್ಷಗಳಿಂದ ತೆರೆದಿರುವ ಬೃಹತ್ ಗಾತ್ರದ ಗುಂಡಿಯೊಂದು ಇದೀಗ ಮತ್ತೊಮ್ಮೆ ಭಾರೀ ಆತಂಕಕ್ಕೆ ಕಾರಣವಾಗಿದೆ.
ನಿರ್ಮಾಣ ಹಂತದ ಬಾವಿ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಎಂಬಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ.
ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಕೋಟ ಸಮೀಪದ ನಾಗರಮಠ ಮರಳು ದಕ್ಕೆಯಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಗಂಭೀರ ಸ್ವರೂಪ ಪಡೆದಿದೆ.