Showing 20 of 2867 posts • Page 18 of 144
ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು.
ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಮಗುಚಿಬಿದ್ದು, ಗ್ಯಾಸ್ ಸೋರಿಕೆ (ಲೀಕೇಜ್) ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಬಿಗ್ ಬಾಸ್ ಕನ್ನಡ 12 ರನ್ನರ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಉಡುಪಿಯ ಸಾಲಿಗ್ರಾಮದಲ್ಲಿರುವ ಹೊಸಬದುಕು ಆಶ್ರಮದಲ್ಲಿ ಆಚರಿಸಿ ಗಮನ ಸೆಳೆದರು. ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ ಅವರು ನಿವಾಸಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದು, ಅವರೊಂದಿಗೆ ಸಮಯ ಕಳೆಯುವ ಮೂಲಕ ಸಂತೋಷ ಹಂಚಿಕೊಂಡರು.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಮಾ. 17ರಂದು ನಗರದ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 66 ಎಲ್ಪಿಜಿ ಟ್ಯಾಂಕರ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ.
“ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟನ ನಡೆಸಲಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆಯನ್ನು ನೀಡಿದೆ.
ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.
ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಈಗಿರುವ ರಸ್ತೆಯನ್ನೇ ಅಗಲೀಕರಣಗೊಂಡು ಸಾಗಿದರೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಗರ್ಭಗುಡಿ, ರಥಬೀದಿ, ವಾಸ್ತುವಿಗೆ ಸಮಸ್ಯೆಯಾಗುತ್ತದೆ.
ಈ ಬಾರಿಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಒಮ್ಮತದಿಂದ ನಡೆಯಬೇಕು ಎಂಬುದು ನಮ್ಮ ಉದ್ದೇಶ. ನಮಗೆ ಹಾಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಲ್ಲದೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಇವರಿಬ್ಬರ ಸಹಕಾರ ಕೂಡಾ ನಮಗೆ ಅಗತ್ಯವಿದೆ. ರಾಜಕೀಯ ರಹಿತವಾಗಿ ದೇವಳದ ಜೀರ್ಣೋದ್ಧಾರ ನಡೆಯಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜ್ ಕುಮಾರ್ ಶೆಟ್ಟಿ ದೊಡ್ಮನೆ ತಿಳಿಸಿದ್ದಾರೆ.
ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾದ ನೇತೃತ್ವದಲ್ಲಿ ಶಿವಾಜಿ ಸಂಗಮ ಕಾರ್ಯಕ್ರಮವನ್ನು ಮಾ.15ರಂದು ಸಂಜೆ 4.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಲತ ಹೇಳಿದ್ದಾರೆ.
ನಗರದ ಹೊರವಲಯದ ಏಜೀಸ್ ಆಟೋ ಗ್ಯಾಸ್ ಪಂಪ್ನಲ್ಲಿ ಎಲ್ಪಿಜಿ ದರ ಏಕಾಏಕಿ 18 ರೂಪಾಯಿ ಏರಿಕೆಯಾಗಿರುವುದು ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್ಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕಾಪು ತಾಲೂಕಿನ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್, ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಸಂದೇಶ್ ಹಾಗೂ ಹಿರಿಯಡಕ ದರ್ಖಾಸು ಪಾಪುಜೆ ನಿವಾಸಿ ಸುಶಾಂತ್ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾರ್ಚ್ 12ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ.
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ.
ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.
ಕೊಲ್ಲಿ ರಾಷ್ಟ್ರದಲ್ಲಿ ಯುದ್ಧಭೀತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದಿಂದಾಗಿ ಹೋಟೆಲ್ ಮಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.