Showing 20 of 3069 posts • Page 18 of 154
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಉದ್ಯೋಗ ಮೇಳದ ಅಧ್ಯಕ್ಷೆ ಡಾ.ದಿವ್ಯಾ ರಾಣಿ ಹೇಳಿದರು.
ಆರ್ಎಸ್ಬಿ ಹಾಗೂ ಬಿಜಿಎಸ್ಬಿ ಸಮುದಾಯದ ವಧು-ವರರಿಗಾಗಿ ‘ಋಣಾನುಬಂಧ’ ಹೆಸರಿನ ವಧು-ವರರ ಪರಿಚಯ ಸಮಾವೇಶವು ಮೇ 17ರಂದು ಬಂಟಕಲ್ಲಿನ ರೋಟರಿ ಸಭಾಭವನದಲ್ಲಿ ನಡೆಯಲಿದೆ. ಬೆಂಗಳೂರು ಆರ್ಎಸ್ಬಿ ಮತ್ತು ಬಿಜಿಎಸ್ಬಿ ಸಪ್ತಪದಿ ವಿವಾಹ ಮಾಹಿತಿ ಕೇಂದ್ರದ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದಾಗ ಪೊಲೀಸರು ನಿಮ್ಮ ಮನೆಗೆ ಸುರಕ್ಷಿತೆ ಒದಗಿಸಲಿದ್ದಾರೆ.
ಉಡುಪಿಯಲ್ಲೊಂದು ಜಲ ವಿಸ್ಮಯ ಕಂಡು ಬರುತ್ತಿದೆ. ಕಡು ಬೇಸಿಗೆಗೆ ಎಲ್ಲಾ ಕಡೆ ನೀರು ಬತ್ತಿ ಹೋದರೂ ಇಲ್ಲೊಂದು ಕೆರೆಯಲ್ಲಿ ತುಂಬಾ ಸ್ಪಟಿಕದಷ್ಟು ಶುದ್ದವಾದ ನೀರು ತುಂಬಿದೆ. ವರ್ಷದ 365 ದಿನವೂ ಈ ಕೆರೆಗೆ ಅಂತರ್ಜಲ ಹರಿದು ಬರುತ್ತಿದೆ. ತೆರೆದಿಟ್ಟ ನಳ್ಳಿಯಿಂದ ಸುರಿದಂತೆ ಈ ಕೆರೆಗೆ ನೀರು ಹರಿಯುತ್ತಿದೆ.
ಉಡುಪಿಯಲ್ಲಿ ದಿನ ನಿತ್ಯ ಟ್ರಾಫಿಕ್ ಸಮಸ್ಯೆ ಮಿತಿ ಮೀರುತ್ತಿದ್ದು, ರಸ್ತೆಯುದ್ದಕ್ಕೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ನಗರದಲ್ಲಿ ಉಂಟಾಗಿರುವ ಸಂಚಾರ ನಿಯಂತ್ರಿಸಲು ನಗರಸಭೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಉಡುಪಿ ನಾಗರಿಕರ ಕಲ್ಯಾಣ ವೇದಿಕೆ ಒತ್ತಾಯಿಸಿದೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ನಡೆಯಲಿದ್ದು, ಇದರ ಪ್ರಯುಕ್ತ ಬೃಹತ್ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಇಂದು ಚಾಲನೆ ನೀಡಲಾಯಿತು.
ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಾಪು ಪುರಸಭೆ ವತಿಯಿಂದ ನಿರ್ಮಿಸಲು ಹೊರಟಿರುವ ಕೊಳಚೆ ನೀರು ಶುದ್ಧೀಕರಣ ಘಟಕ (STP) ನಿರ್ಮಾಣ ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್ನಲ್ಲಿ ನಡೆಯಿತು.
ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ಮಲ್ಪೆ ಇದರ ವತಿಯಿಂದ ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ ಹಾಗೂ ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳ ಅವರ ಸಂಕಲ್ಪದಂತೆ, ಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ ‘ಶ್ರೀಆನಂದ ಶರಧಿ’ ಎಂಬ ಪ್ರತಿಷ್ಠಾನದ ನೂತನ ನಿವೇಶನದಲ್ಲಿ ಮೇ 15 ರಿಂದ ಮೇ 31 ರವರೆಗೆ “ಬೃಹತ್ ಕೃಷಿ ಮೇಳ, ಭಜನಾ ಕಮ್ಮಟ ಹಾಗೂ ಮಾತೃ ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ವಿಜಯ ಕೊಡವೂರು ತಿಳಿಸಿದ್ದಾರೆ
ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.
ಟ್ರಾಕ್ಟರ್ ಟಿಲ್ಲರ್ ವಾಹನ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಉಡುಪಿಯ ಕೊಕ್ಕರ್ಣೆ ಮೊಗವೀರ ಪೇಟೆ ಬಳಿ ನಡೆದಿದೆ. ಮೃತರನ್ನು ಪಕೀರಪ್ಪ ಎಂದು ಗುರುತಿಸಲಾಗಿದೆ.
ಬಸ್ ಪ್ರಯಾಣದ ವೇಳೆ ತಮಗೆ ಆದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಇಂದಿನ ಪ್ರಪಂಚದಲ್ಲಿ ಮರ, ಬೀಜದ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ. ಆದರೆ ಭೂಮಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರತಿಯೊಂದು ಬೀಜದಲ್ಲೂ ಮರವಾಗುವ ಶಕ್ತಿ ಹಾಗೂ ಗುಣ ಇದೆ.
ಕನ್ನಡ ಭಾಷೆಯ ಬಳಕೆಯಲ್ಲಿ ಬಹಳಷ್ಟು ವಿವಿಧ ಕನ್ನಡ ಪ್ರಕಾರಗಳಿವೆ. ನಾವು ಮಾತಾನುಡುವುದು ಕನ್ನಡ ಪುಸ್ತಕದ ಕನ್ನಡ. ಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ
ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ ಘಟನೆ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲದ ವಾರ್ಷಿಕ ಸಿರಿ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.
ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದೆ.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಇದೇ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ಪಿ ಹೇಳಿದರು.