Showing 20 of 2862 posts • Page 2 of 144
ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಪ್ರಕ್ಷುಬ್ಧಗೊಂಡು ಅಬ್ಬರ ಹೆಚ್ಚಾಗುತ್ತದೆ. ಅಪಾಯಕಾರಿ ಅಲೆಗಳು ದಡವನ್ನು ಅಪ್ಪಳಿಸುತ್ತದೆ.
ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
ರಸ್ತೆ ಬದಿಯ ಮಣ್ಣು ಕುಸಿದ ಪರಿಣಾಮ ತಂಪು ಪಾನೀಯ ಸಾಗಾಟದ ವಾಹನವೊಂದು ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ಅಂಬಾಗಿಲು–ಮಣಿಪಾಲ ರಸ್ತೆಯ ಸುಜಾತಾ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಶನಿವಾರ ನಡೆದಿದೆ.
ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಉಡುಪಿ ಕೋಸ್ಟಲ್ ಲೀಜನ್ನ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಎಸ್.ವಿ., ಕಾರ್ಯದರ್ಶಿಯಾಗಿ ಸುನಂದಾ ಹಾಗೂ ಕೋಶಾಧಿಕಾರಿಯಾಗಿ ಮಮತಾ ಅಮೀನ್ ಪದಗ್ರಹಣ ಮಾಡಿದರು.
ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ.
ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದೆ. ಕೇರಳ ಪ್ರವೇಶಿಸಿದ್ದ ಮುಂಗಾರು ಇದೀಗ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲು ಆರಂಭಿಸಿದೆ.
ಕೆಲವು ವರ್ಷಗಳ ಹಿಂದೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಯಾತ್ರಿಕರ ಮೃತದೇಹವನ್ನು ಭಾರಿ ಮಳೆಯ ನಡುವೆಯೂ ಹರಸಾಹಸ ಪಟ್ಟು ಮೇಲಕ್ಕೆತ್ತಿ ತಂದು ರಾಜ್ಯ ಸರಕಾರದ ಗಮನ ಸೆಳೆದು ಮುಖ್ಯಮಂತ್ರಿ ಪದಕ್ಕ ಪಡೆದಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಇದೀಗ ಮತ್ತೊಂದು ಸಾಹಸ ಕಾರ್ಯದ ಮೂಲಕ ವ್ಯಕ್ತಿಯ ಜೀವ ಉಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದ ದನವೊಂದನ್ನು ಸ್ಥಳೀಯರು ಹಾಗೂ ಕ್ರೇನ್ ಚಾಲಕರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಶುಕ್ರವಾರ ಹೊಸಂಗಡಿ ಗ್ರಾಮದ ಅಂಬೂರು ಪ್ರದೇಶದಲ್ಲಿ ನಡೆದಿದೆ.
ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಮಾಲಕತ್ವದ ಬಿಆರ್ಎಸ್ ಲೈಫ್ ಗ್ರೂಪ್ ದುಬೈ ಶೈಲಿಯಲ್ಲಿ ನಿರ್ಮಿಸಿದ್ದ ಆರು ಮಹಡಿಯ ಸರ್ವಸುಸಜ್ಜಿತ ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣೆ ಇದೀಗ ಸರಕಾರಕ್ಕೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ.
ಮಟ್ಟು ಗ್ರಾಮದ ಹೆಮ್ಮೆ, ರೈತರ ಭಾವನೆ ಹಾಗೂ ವಿಶ್ವಪ್ರಸಿದ್ಧ ಮಟ್ಟುಗುಳ್ಳದ ಪ್ರತೀಕವಾಗಿದ್ದ ಪ್ರತಿಕೃತಿಯನ್ನು ಇತ್ತೀಚೆಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.
ಮಹೇಶ್ ಮರ್ಣೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕಲಾವಿದ. ಅಶ್ವಥ ಎಲೆಯಲ್ಲಿ ಭಾವಚಿತ್ರ ಮೂಡಿಸುವುದರಲ್ಲಿ ಇವರು ಎತ್ತಿದ ಕೈ. ಅನೇಕ ಗಣ್ಯರು ಮತ್ತು ರಾಜಕೀಯ ನಾಯಕರ ಭಾವಚಿತ್ರಗಳನ್ನು ಎಲೆಯಲ್ಲಿ ಮೂಡಿಸಿ ಸೈ ಎನಿಸಿದ್ದಾರೆ.
ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ಸಂಘಟನಾ ಕೌಶಲ್ಯದ ಮೂಲಕ ಜಿಲ್ಲೆಯಾದ್ಯಂತ ಗುರುತಿಸಿಕೊಂಡಿರುವ ಲಯನ್ ಲೂಯಿಸ್ ಲೋಬೊ ಅವರು ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಸಿ ಇದರ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೂಕ್ತ ನಿರ್ವಹಣೆಯ ಕೊರತೆಯ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಬುಧವಾರ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.