Showing 20 of 3077 posts • Page 20 of 154
ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಯ ಹೊಸ ಶ್ರೇಷ್ಠತಾ ಕೇಂದ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಅನಾವರಣಗೊಳಿಸಿದರು.
ಶ್ರೀರಥಬೀದಿ- ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು.
ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ.
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಸಮೀಪ ಏಪ್ರಿಲ್ 24ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 27ರಂದು ನಿಧನ ಹೊಂದಿದ್ದಾರೆ.
ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ಪೊಲೀಸ್ ಇಲಾಖೆ, ಉಡುಪಿ ಜಿಲ್ಲೆಯಲ್ಲಿಯೂ ವಿಶೇಷ ಕಾರ್ಯಾಚರಣೆ ನಡೆಸಿದೆ.
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಪರಿಶೀಲನೆ ನಡೆಸಿದರು.
ವಿಶ್ವದ ಜನಪ್ರಿಯ ನಾಯಕ ಹಾಗೂ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಗರದ ಮಧ್ಯಭಾಗದಲ್ಲಿರುವ ಖಾದರ್ ವಾಣಿಜ್ಯ ಸಂಕೀರ್ಣದಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಪ್ಲಾಸ್ಟಿಕ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಆರಕ್ಕೂ ಹೆಚ್ಚು ಅಂಗಡಿಗಳನ್ನು ಸಂಪೂರ್ಣ ಭಸ್ಮಗೊಳಿಸಿದೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಭಾನುವಾರ ಕೊಡವೂರು ಶಂಕರನಾರಯಾಣ ದೇಗುಲದ ವಸಂತ ಮಂಟಪದ ನಡೆಯಿತು.
ಬೈಂದೂರು ಶಿರೂರು ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ನಲ್ಲಿ ಚಮತ್ಕಾರಗೊಂಡಿದ್ದು, 35% ನಿಂದ ನೇರವಾಗಿ 94% ಫಲಿತಾಂಶಕ್ಕೆ ಭಾರೀ ಜಿಗಿತಗೊಂಡಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರನ್ನು ಶ್ರೀಕೃಷ್ಣಮಠಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯ ಕಾಳಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೋಡು ಶ್ರೀ ಕುಮಾರಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ವಾರಾಹಿ ಕಾಲುವೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮೇ 3ರಂದು ಸಂಜೆ 4ಗಂಟೆಗೆ ದೇವಸ್ಥಾನದ ಪ್ರಾಂಗಣದಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.
ಉಡುಪಿಯಲ್ಲಿ ನಾರಿ ಶಕ್ತಿ ಫೋರಂ ನವರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾರಿ ಶಕ್ತಿ ವಂದನ ಅಧಿನಿಯಮವನ್ನು ಜಾರಿಯಾಗದಂತೆ ತಡೆಹಿಡಿದ ಕೇಂದ್ರದ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.