Showing 20 of 2848 posts • Page 20 of 143
ಕಂಬಳ ವಿವಾದ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿ ದಿನ ನಿಗದಿ ಮಾಡಿದ್ದಾರೆ. ಸ್ವಂತ ಹಣವನ್ನು ಖರ್ಚು ಮಾಡಿ ಕಂಬಳ ಮಾಡುತ್ತಿದ್ದಾರೆ. ವಿನಾಕಾರಣ ರಾಜಕಾರಣ ಬೆರಿಸಲಾಗಿದೆ. ಕಾಂಗ್ರೆಸ್ ಮತ್ತು ಮಾಜಿ ಸಚಿವರು ಈ ಕೆಲಸ ಮಾಡಿದ್ದಾರೆ. ಕಂಬಳದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೆಲಸ ಮಾಡುತ್ತಾರೆ ಎಂದರು.
ಹೊಡೆಯ ಕಡಲ ಕಿನಾರೆ ಸಮೀಪವಿರುವ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ನಿಷೇಧಾಜ್ಞೆ ಮಧ್ಯೆಯೇ ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್ ನೀಡಿದ ದೂರಿನಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ.
ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ (ಟಿಟಿ) ವಾಹನವೊಂದು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಿಫಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು.
ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟದ ಮಧ್ಯೆಯೇ ಉಡುಪಿ ಕಂಬಳದ ಶಂಕುಸ್ಥಾಪನೆ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆ ಇಂದು ನೆರವೇರಿತು.
ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದಲ್ಲಿ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ಸಂಬಂಧ ಫೆ.28ರ ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ಮಾಡಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರು.
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಚೇರಿಗಳ ಭೇಟಿ ಮಾಡಿ ನನಗೆ ಬಹಳ ನೋವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಗಲೀಜು ಹಾಕಲು ಓಪನ್ ಡ್ರಮ್ ಇಟ್ಟಿದ್ದಾರೆ. ಪ್ರತ್ಯೇಕ ಡಸ್ಟ್ ಬಿನ್ ಇರಿಸಲು ಸೂಚಿಸಲಾಗಿದೆ. ತಾಲೂಕು ಕಚೇರಿಯಲ್ಲಿ ತುಂಬಾ ಕೇಸುಗಳು ಪೆಂಡಿಂಗ್ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳದ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದಾರೆ.
ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ ಫೆ.28ರಿಂದ ಮಾ.2ರವರೆಗೆ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ಗ್ಯಾಲರಿ ದೃಷ್ಠಿಯಲ್ಲಿ ನಡೆಯಲಿದೆ ಎಂದು ಫೋರಂ ಅಧ್ಯಕ್ಷ ರಮೇಶ್ ರಾವ್ ತಿಳಿಸಿದರು.
ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಫೋಸ್ಟ್ ನ್ನು ಹಾಕಿದ ಬಿಂದು ಸಿರ ಎಂಬ ಮಹಿಳೆ ವಿರುದ್ಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಫೆ. 28 ಮತ್ತು ಮಾರ್ಚ್ 1ರಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ದಯಾನಂದ ಕರ್ಕೇರ ತಿಳಿಸಿದರು.
ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.
ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ವತಿಯಿಂದ “ಮರಾಟಿ ಹೋಳಿ ಸಂಭ್ರಮ -2026” ಅನ್ನು ಇದೇ ಮಾರ್ಚ್ 1ರಂದು ಸಂಜೆ 4ಗಂಟೆಗೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಮುಂಡ್ಕಿನಜೆಡ್ಡು ಆರ್.ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದರು.