Showing 20 of 3077 posts • Page 21 of 154
ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ. ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.
ರಾಜ್ಯಕ್ಕೆ ಉಡುಪಿಯ ಶಂಕರನಾರಾಯಣದ ವಿದ್ಯಾರ್ಥಿ ಪ್ರೀತಂ ಪೂಜಾರಿ ಟಾಪರ್ ಆಗಿದ್ದಾರೆ. ಶಂಕರನಾರಾಯಣದ ಮದರ್ ತೆರಸ ಮೆಮೋರಿಯಲ್ ಶಾಲೆ ವಿದ್ಯಾರ್ಥಿಯಾಗಿದ್ದು, 620 ಅಂಕ ಬರಬಹುದು ಎಂದು ಭಾವಿಸಿದ್ದೆ. ಟಾಪರ್ ಆಗುತ್ತೇನೆ ಅನ್ನೋ ಭರವಸೆ ಇತ್ತು. ಆದರೆ 625 ಅಂಕ ನಿರೀಕ್ಷಿಸಿರಲಿಲ್ಲ ಎಂದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರಕಾರವು ಮಹಿಳಾ ಮಸೂದೆಯನ್ನು ನೆಪವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಅನ್ನು ಜಾರಿಗೆ ತರಲು ಹೊರಟಿತ್ತು.
ರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಹಬಾಳ್ವೆ ಉಡುಪಿ, ಸಿಐಟಿಯು, ಭಾರತೀಯ ಕ್ರೈಸ್ತ ಒಕ್ಕೂಟ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಹಿತ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಪ್ರಯುಕ್ತ “ದೇಶಾಭಿಮಾನಿ ಸಮಾವೇಶ” ವನ್ನು ಇದೇ ಎ.26ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು.
ಮಹಿಳೆಯರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಾರಿಗೊಳಿಸಲು ಮುಂದಾಗಿದ್ದ ‘ನಾರಿ ಶಕ್ತಿ ವಂದನ್ ಕಾಯ್ದೆಯ ತಿದ್ದುಪಡಿ ಮಸೂದೆ’ ಅನ್ನು ವಿಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳಾ ವಿರೋಧಿ ಧೋರಣೆ ತೋರಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಇದೇ ಎ.26ರಂದು ಸಂಜೆ 5 ಗಂಟೆಗೆ ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು.
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.
ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ವಿಶ್ವಮಾನ್ಯ ಯತಿಕುಲಚಕ್ರವರ್ತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಉದ್ಘಾಟಿಸಲಾಯಿತು.
ಯಾನ್ ತುಳುವಪ್ಪೆನ ಮಗೆ, ಎನ್ನ ಬಾಲ್ಯ ಜೀವನ, ಬಾಲ್ಯ ಶಿಕ್ಷಣ ಈ ತುಳುನಾಡ್ ಮನ್ಸ್ ಡೇ. ಯಾನ್ ತುಳುನಾಡುದಾಯೆ.. ಯಾನ್ ಪುಟ್ಟುದಿನಿ ಎಂದು ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಸೋಮವಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರಧಾನಾಲಯದ ಕಾಲೇಜು ಮೈದಾನದಲ್ಲಿ ನಡೆದ ಪವಿತ್ರ ಸಮಾರಂಭದಲ್ಲಿ ಅಭಿಷಿಕ್ತಗೊಳಿಸಿ ಪೀಠಾರೋಹಣಗೊಳಿಸಲಾಯಿತು.
ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು. ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಸೋಸಿಯೇಷನ್ ಗೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು.
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಡೆಯಲಿದೆ.
ಇಲ್ಲಿನ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು.
ಮಕ್ಕಳ ಮೊಬೈಲ್ ಗೀಳಿನಿಂದ ಸಮಾಜದಲ್ಲಿ ಅನೇಕ ದುಷ್ಪರಿಣಾಮಗಳು ಆಗುತ್ತಿವೆ. ಈ ನಿಟ್ಟಿನಲ್ಲಿ ಸರಕಾರವು ಮಕ್ಕಳು ಅತಿಯಾಗಿ ಮೊಬೈಲ್ ಬಳಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುತ್ತಿದೆ.
ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಹೇಳಿದರು.
ಲೋಕ ಕಲ್ಯಾಣಾರ್ಥವಾಗಿ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಸೇವಾಕರ್ತರಾಗಿರುವ ಪ್ರಸಾದ್ ರಾಜ್ ಕಾಂಚನ್ ಹೇಳಿದರು.