Showing 20 of 3068 posts • Page 23 of 154
ಕುಂದಾಪುರ ಕೋಡಿ ಬೀಚ್ನಲ್ಲಿ ಡ್ರೋನ್ ಕ್ಯಾಮರಾ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವೀಡಿಯೊ ಚಿತ್ರೀಕರಣಕ್ಕಾಗಿ ಡ್ರೋನ್ ಹಾರಿಸುತ್ತಿದ್ದ ವೇಳೆ ಅಚಾನಕ್ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದು, ತಕ್ಷಣವೇ ಡ್ರೋನ್ ಮಾಲೀಕರು ಮುಳುಗು ತಜ್ಞ ದಿನೇಶ್ ಖಾರ್ವಿಯನ್ನು ಸಂಪರ್ಕಿಸಿದ್ದಾರೆ
ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 196 ಬಿಎಸ್ಎನ್ಎಲ್ ಟವರ್ಗಳಿದ್ದು, ಇತ್ತೀಚೆಗೆ 39 ಹೊಸ 4ಜಿ ಟವರ್ಗಳು ಮಂಜೂರಾಗಿವೆ. ಇದರಲ್ಲಿ 30 ಟವರ್ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.
ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ ಆರ್ಎಸ್ಎಸ್. ಈ ಸಂಘಟನೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಡಿರುವ ಮಾತು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.
ಉಡುಪಿಯ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಪ್ರತಿಷ್ಠಿತ ಅಡ್ವಕೇಟ್ ಪಿ. ಶಿವಾಜಿ ಶೆಟ್ಟಿ ಸ್ಮಾರಕ 10ನೇ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಎ.10 ರಿಂದ 12ರವರೆಗೆ ಆಯೋಜಿಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರೊ. ಸುರೇಖಾ ಕೆ. ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳ ವತಿಯಿಂದ ಗುಡ್ಡೆಗುಳಿಗ ದೈವಸ್ಥಾನದಲ್ಲಿ ಕಾಲಾವಧಿ ಕೋಲ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ ‘ತಿಂಗಳ ಅಂಗಳ’ ಕಾರ್ಯಕ್ರಮದ ಉದ್ಘಾಟನೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.
ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ರಾ. ಹೆ. ಅಂಡರ್ಪಾಸ್ ಮತ್ತು ವೆಹಿಕಲ್ ಓವರ್ಪಾಸ್ ನಿರ್ಮಾಣ ಕಾಮಗಾರಿ ಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪರಿಶೀಲಿಸಿದರು.
ಮೂಡು ಅಲೆವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮೋಹನ ತಂತ್ರಿ (82) ಬುಧವಾರ ನಿಧನರಾದರು.
ಆಟೋ ಗ್ಯಾಸ್ (ಎಲ್ಪಿಜಿ) ಕೊರತೆ ತೀವ್ರವಾಗಿದ್ದು, ಚಾಲಕರಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಾದ್ಯಂತ ಗ್ಯಾಸ್ ಸ್ಟಾಕ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವೆಡೆ ಸ್ವಲ್ಪ ಪ್ರಮಾಣದಲ್ಲಿ ಸ್ಟಾಕ್ ಇದ್ದರೂ ದರ ಹೆಚ್ಚಾದ ಕಾರಣ ಆಟೋ ಚಾಲಕರು ತಕರಾರು ಮಾಡುತ್ತಿದ್ದಾರೆ.
ಹಿರಿಯಡಕ ರಾಷ್ಟ್ರೀಯ ಹೆದ್ದಾರಿ (169 ಎ) ಸಮೀಪ 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಶ್ಯಾಮಿಲಿ ಸಮೂಹ ಸಂಸ್ಥೆಗಳ ಸಹಸಂಸ್ಥೆ ಶ್ಯಾಮಿಲಿ ಸ್ಪ್ರಿಂಗ್ಸ್ ಲಕ್ಸುರಿ ರೆಸಾರ್ಟ್ ಮಂಗಳವಾರ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಸಿ.ಇ.ಐ.ಆರ್ ಪೋರ್ಟ್ ಮೂಲಕ ದೂರು ದಾಖಲಿಸಿದ್ದ ಪ್ರಕರಣಗಳ ಪತ್ತೆಗಾಗಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.
ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿ ಬಂದ ಘಟನೆ ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ಸಂಭವಿಸಿದೆ.
ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸುವೊಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ.
ಹೆಬ್ರಿ ತಾಲೂಕಿನಲ್ಲಿ ಮತ್ತೆ ಆನೆ ಹಾವಳಿ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತೆಂಗುಮಾರ್ ಲಕ್ಷ್ಮಣ ಗೌಡ, ಆನಂದ ಗೌಡ ಹಾಗೂ ಪೀತಬೈಲು ಜಯಂತ ಗೌಡ ಅವರ ತೋಟಗಳಿಗೆ ರಾತ್ರಿ ಆನೆ ದಾಳಿ ನಡೆಸಿ ತೋಟವನ್ನು ಸಂಪೂರ್ಣ ಹಾನಿಗೊಳಿಸಿದೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಉಡುಪಿ: ಅಜೆಕಾರು ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ. ಈತನ ದೈವ ಕುಣಿತ ಈಗ ವೈರಲ್ ಆಗುತ್ತಿದೆ. ಇದು ಅನುವಂಶೀಯವಾಗಿ ಈತನಿಗೆ ಬಂದ ಸಿದ್ದಿ ಎಂದು ಹೇಳಲಾಗುತ್ತಿದೆ. ಶಿರ್ಲಾಲು ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಸಮರ್ಥ್ ಎನ್ನುವ ಹುಡುಗನೇ ದೈವ ನರ್ತವನ್ನು ಮಾಡಿ ಸಣ್ಣ ವಯಸ್ಸಿನಲ್ಲೇ ತಮ್ಮ ಅಜ್ಜನ ಮತ್ತು ತಂದೆಯ ಕಸುಬನ್ನು ಮುಂದುವರಿಸಿಕೊಂಡು ಹೋಗಿದ್ದಾನೆ. ಈತನ ಧಾರ್ಮಿಕ ನಂಬಿಕೆಗೆ […]