Showing 20 of 3077 posts • Page 25 of 154
ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ(ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದ ಯಕ್ಷಗಾನ ಸೇವೆಯ ವೇಳೆ ಮಹಿಷಾಸುರನ ಪಾತ್ರಧಾರಿ ತೋರಿದ ಅತಿರೇಕದ ಆವೇಶ ಈಗ ವಿವಾದಕ್ಕೆ ಕಾರಣವಾಗಿದೆ.
ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶಿಲ್ ಜತನ್ನ ಹೇಳಿದರು.
ಸುದೀಪ್ ರೈ ಆಸ್ಪತ್ರೆಯಲ್ಲೇ ಪೊಲೀಸರ ಮುಂದೆಯೇ ‘ವೈಯಕ್ತಿಕ ಕಾರಣದಿಂದ ನಾನೇ ಸ್ವ ಇಚ್ಛೆಯಿಂದ ವಿಷ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಆದರೆ ಸುದೀಪ್ ರೈ ತಂದೆ ಮತ್ತು ವೇಣುಗೋಪಾಲ ಶೆಟ್ಟಿ ನನ್ನ ಮೇಲೆ ಮಾಡುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು. ನನ್ನ ವಿರುದ್ಧ ಕೇಳಿಬರುತ್ತಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳಾಗಿದ್ದು, ಇದು ನನ್ನ ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶದಿಂದ ಮಾಡುತ್ತಿರುವ ಆರೋಪ ಎಂದು ಸುದೀಪ್ ರೈ ಪತ್ನಿ ನಟಿ ಸೌಮ್ಯ ಶೆಟ್ಟಿ ಹೇಳಿದ್ದಾರೆ.
ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣವು ಉಡುಪಿ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನ ಸಮೀಪದಲ್ಲಿರುವ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು ಹಾಗೂ ನಾಗ ದೇವರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಎ. 3ರಿಂದ ಎ. 7ರ ವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಬುಧವಾರ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
ಸಹಜವಾಗಿ ದನಗಳಿಗೆ ನಾಲ್ಕು ಕೆಚ್ಚಲುಗಳು ಇರುವುದೇ ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಪರ್ಕಳದ ಅಚ್ಯುತ ನಗರದಲ್ಲಿ ಅಪರೂಪದ ಐದು ಕೆಚ್ಚಲಿನ ದನವೊಂದು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ (ಕೆಎಂಸಿ)ಯಲ್ಲಿ ಮೊದಲ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ದೀರ್ಘಕಾಲದ ಯಕೃತ್ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಗೆ, ಮೃತ ದಾನಿ ಕಸಿ ಕಾರ್ಯಕ್ರಮದಡಿಯಲ್ಲಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಣಿಪಾಲ ಮಾಹೆಯ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್ ಕಂಟಿಪುಡಿ ಹೇಳಿದರು.
ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದ ಯುವಕನೋರ್ವ ತಪಾಸಣಾಧಿಕಾರಿಯ ಸಮಯಪ್ರಜ್ಞೆಯಿಂದ ಬದುಕುಲಿದ ಘಟನೆ ಉಡುಪಿಯ ಇನ್ನಂಜೆಯಲ್ಲಿ ನಡೆದಿದೆ.
ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಅವರ ನಿಗೂಢ ಸಾವು ಈಗ ಕರಾವಳಿಯಾದ್ಯಂತ ಭಾರಿ ಚರ್ಚೆಗೆ ಮತ್ತು ಹಲವು ಸಂಶಯಗಳಿಗೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಸೋಶಿಯಲ್ ಮೀಡಿಯಾ ಮೂಲಕ ಪ್ರೀತಿಸಿ, ಎರಡೂ ಕುಟುಂಬಗಳನ್ನು ಒಪ್ಪಿಸಿ ಕಳೆದ ಫೆಬ್ರವರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ ಸುದೀಪ್ ಮತ್ತು ಕಾರ್ಕಳದ ಮೇಕಪ್ ಆರ್ಟಿಸ್ಟ್ ಸೌಮ್ಯ ಶೆಟ್ಟಿ ಅವರ ಜೀವನದಲ್ಲಿ ಒಂದೇ ತಿಂಗಳೊಳಗೆ ಬಿರುಗಾಳಿ ಎದ್ದಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎಪ್ರಿಲ್ 1ರಂದು ಬೆಳಿಗ್ಗೆ 10ರಿಂದ 5ಗಂಟೆಯವರೆಗೆ ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯಕೊಡವೂರು ತಿಳಿಸಿದರು.
ಸಂತೆಕಟ್ಟೆ ಮೇಲ್ಸೇತುವೆ ಲೋಕಾರ್ಪಣೆಗೊಂಡಿದ್ದು, ಸಾರ್ವಜನಿಕ ಬಳಕೆಗೆ ಇಂದಿನಿಂದ ಮುಕ್ತ ಎಂದು ಸಂಸದ ಕೋಟ ಅವರು ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ವಿವಿಧಡೆ ಶನಿವಾರ ರಾತ್ರಿ ಏಕಾಏಕಿ ಮಳೆ ಸುರಿದಿದೆ. ಈ ಅನಿರೀಕ್ಷಿತ ಮಳೆಯಿಂದ ಜನ ಕಂಗಲಾಗಿದ್ದಾರೆ. ಸುರಿಯುವ ಮಳೆಯಲ್ಲೇ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ರಥೋತ್ಸವ ನಡೆದಿದೆ.
ನಗರದಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇದರಿಂದ ವಾಹನ ಸವಾರರು ತೀರಾ ತೊಂದರೆ ಅನುಭವಿಸುವಂತಾಯಿತು.
ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ‘ಗರಿಗಳ ಭಾನುವಾರ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ‘ಪಾಮ್ ಸಂಡೆ’ಯನ್ನು ಜಿಲ್ಲಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಶನಿವಾರ ಸಂಜೆ ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದನು.