Showing 20 of 3077 posts • Page 26 of 154
ಹೆಮ್ಮಾಡಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಡುವೆ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೇ ನಾನಾ ಭಂಗಿಯಲ್ಲಿ ‘ಸರ್ಕಸ್’ ಮಾಡಿದ್ದ ಪುಂಡನ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಪರಿಶೀಲಿಸಿದ ಕುಂದಾಪುರ ಸಂಚಾರ ಠಾಣೆ ಪೊಲೀಸರು ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅನಂತೇಶ್ವರ ದೇವಾಲಯದಲ್ಲಿ ರಾಮೋತ್ಸವದ ಪ್ರಯುಕ್ತ ರಥೋತ್ಸವ ಜರಗಿತ್ತು ಇದರ ಅಂಗವಾಗಿ ದೇವರಿಗೆ ಆರತಿಯನ್ನು ಬೆಳಗುದರ ಮೂಲಕ ರಥೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.
ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಉಪ ನೊಂದಣಿ ಕಚೇರಿಗಳು ಮಾರ್ಚ್ 28 ಮತ್ತು 29 ರಂದು ಕರ್ತವ್ಯ ನಿರ್ವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,
ಯಕ್ಷಗಾನದ ನಡುವಲ್ಲಿ ಪ್ರೇಕ್ಷಕರಿಗೆ ಕಲಾವಿದ ಕ್ಲಾಸ್ ತೆಗೆದುಕೊಂಡ ಘಟನೆ ಧರ್ಮಸ್ಥಳ ಮೇಳದ ಯಕ್ಷಗಾನ ಪ್ರಸಂಗದಲ್ಲಿ ಕುಂದಾಪುರದ ಹೆನ್ನಾಬೈಲಿನಲ್ಲಿ ನಡೆಯುತ್ತಿದ್ದ ಪ್ರದರ್ಶನದಲ್ಲಿ ನಡೆದಿದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಬೆಳೆಯುತ್ತಿರುವ ನಗರ ಪ್ರದೇಶದಲ್ಲಿ ಸದ್ಯ ಅತಿ ದೊಡ್ಡದಾಗಿ ಕಾಣುತ್ತಿರುವ ಸಮಸ್ಯೆ ಎಂದರೆ ಅದು ತ್ಯಾಜ್ಯ ವಿಲೇವಾರಿ ಸಮಸ್ಯೆ. ಸದ್ಯ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದ್ಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಮತ್ತೆ ಎರಡನೇ ಬಾರಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.
ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಕ್ಯಾಶ್ ಟೇಬಲ್ ನಲ್ಲಿದ್ದ ಮಾಲೀಕನ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಕೊಡಂಕೂರು ಮಹಾಲಕ್ಷ್ಮೀ ಹೋಟೆಲ್ ನಲ್ಲಿ ನಡೆದಿದೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಪಾದಚಾರಿ ಮಹಿಳೆಗೆ ಕ್ರೇನ್ ಡಿಕ್ಕಿ ಹೊಡೆದು ಅವರು ಮೃತಪಟ್ಟ ಘಟನೆ ಸಂಭವಿಸಿದೆ.
ಕುಟುಂಬ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ಮಹಿಳೆ ತನ್ನ 11 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ಪುಂಚಲಕಾಡು ಪ್ರದೇಶದಲ್ಲಿ ನಡೆದಿದೆ.
ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಕಾಪುವಿನ ಶ್ರೀ ಹಳೇ ಮಾರಿಗುಡಿ , ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇ ಮಾರಿಗುಡಿ (ಕಲ್ಯ)ಯಲ್ಲಿ ನಡೆಯುವ ಎರಡು ದಿನಗಳ ಸುಗ್ಗಿ ಮಾರಿಪೂಜೆ ಬುಧವಾರ ಸಂಜೆ ವೈಭವದಿಂದ ಸಂಪನ್ನಗೊಂಡಿತು.
ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.
ಶ್ರೀಕೃಷ್ಣ ದೇವರ ದರ್ಶನಕ್ಕೆ ತೆರಳುವ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು, ಪ್ರತಿಯೊಬ್ಬ ಭಕ್ತರಿಗೂ ದೇವರ ದರ್ಶನವಾಗಬೇಕೆನ್ನುವ ನಿಟ್ಟಿನಲ್ಲಿ ನೂತನ ಪಥಕ್ಕೆ ತಯಾರಿ ಮಾಡಲಾಗಿದೆ ಎಂದು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ.
ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು.
ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು.
ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆಯು ಮಾರ್ಚ್ 24 ಮತ್ತು 25 ರಂದು ನಡೆಯಲಿದೆ. ಕಾಪುವಿನ 3 ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ನಡೆಯಲಿದೆ.
ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಅನಿರ್ದಿಷ್ಟಾವಧಿ ಧರಣಿ ಆರಂಭ ಮಾಡಿದ ಎರಡನೇ ದಿನಕ್ಕೆ ಯಶಸ್ಸು ಸಿಕ್ಕಿದೆ.