Showing 20 of 3077 posts • Page 27 of 154
ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಹಿರಿಯಡಕ ಸಮೀಪದ ಶೀರೂರು ಮೂಲ ಮಠದಲ್ಲಿ 72ನೇ ಉತ್ಸವವನ್ನಾಗಿ ಮಾ. 25 ರಿಂದ 28 ರ ವರೆಗೆ ಶ್ರೀರಾಮನವಮೀ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶ್ರೀಮಠದ ದಿವಾನ ಡಾ. ಉದಯ ಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ.
ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ರಾಜಕೀಯ ಹತಾಶೆಯಿಂದ ಮಾಜಿ ಶಾಸಕ ರಘುಪತಿ ಮಾಡಿರುವ ಆಧಾರ ರಹಿತ ಆರೋಪವನ್ನು ತಕ್ಷಣ ಹಿಂಪಡೆದು ಬೇಷರತ್ ಕ್ಷಮೆ ಯಾಚಿಸಬೇಕೆಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಆಗ್ರಹಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಧರ್ಮ ಹಾಗು ದೇವರ ಹೆಸರಿನಲ್ಲಿ ವೋಟ್ ಕೇಳುತ್ತಿದ್ದಾರೆ ಹೊರತು ಅಭಿವೃದ್ದಿ ಮಾಡುತ್ತಿಲ್ಲ. ಕೇವಲ ರಾಜ್ಯಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.
ನಂದಿನಿ ಹಾಲಿನ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಡುಪಿ ಬಲಾಯಿ ಪಾದೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಮುಹಮ್ಮದ್ ಸಮೀರ್ ಶರೀಫ್ (43) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾಗಿದ್ದಾರೆ.
ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ.
ಹೆಜಮಾಡಿ ಟೋಲ್ ಬಳಿ ಟಯರ್ ಪಂಕ್ಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಭಾನುವಾರ ಸಂಭವಿಸಿದೆ.
ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ರಾಮೋತ್ಸವವನ್ನು ಅತ್ಯಂತ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಈ ಸಂಬಂಧ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆಯನ್ನು ಮಾಡಿ, ಸೀತಾ ಲಕ್ಷ್ಮಣ ಸಹಿತ ಶ್ರೀ ರಾಮ ದೇವರಿಗೆ ವಿಶೇಷ ಪೂಜೆಯನ್ನು ಮಾಡಿ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, ಅನುಗ್ರಹ ಸಂದೇಶ ನೀಡಿದರು.
ಕರಾವಳಿ ಪ್ರದೇಶದ ಜನರ ಬದುಕು ಸಮುದ್ರದ ಜೊತೆ ಬಹುತೇಕ ಹೊಂದಿಕೊಂಡಿದೆ. ಮಳೆಗಾಲದ ಅವಧಿಯಲ್ಲಿ ಸಮುದ್ರ ಅಲೆಗಳು ಭಾರೀ ಆಗಿರುವುದರಿಂದ ಹಾಗೂ ಸರ್ಕಾರದ ಮೀನುಗಾರಿಕೆ ನಿಷೇಧವೂ ಇರುವುದರಿಂದ ಈ ಅವಧಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳು ಬಹುತೇಕ ನಿಲ್ಲುತ್ತವೆ.
ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ಸ್ಟ್ಯಾಂಡ್ ಹತ್ತಿರ ಬೃಹತ್ ಗಾತ್ರದ ಹೆಬ್ಬಾವೊಂದನ್ನು ರಕ್ಷಿಸಲಾಗಿದೆ. ರೈಲ್ವೆ ಪ್ರಯಾಣಿಕರ ಸಂಚಾರ ಇರುವ ಸ್ಥಳದಲ್ಲಿ ಹೆಬ್ಬಾವಿನ ಚಲನವಲನವನ್ನು ಗಮನಿಸಿದ ಆಟೋ ಚಾಲಕ ಪ್ರಶಾಂತ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು.
ಕ್ರೀಡೆ ಎಂದರೆ ಕೇವಲ ಸ್ಪರ್ಧೆಯಲ್ಲ, ಅದು ವ್ಯಕ್ತಿತ್ವ, ಶಿಸ್ತು ಮತ್ತು ಐಕ್ಯತೆಯ ಪ್ರತಿಬಿಂಬವಾಗಿದ್ದು, ಸವಾಲುಗಳನ್ನು ಎದುರಿಸುವ ಧೈರ್ಯ ಹಾಗೂ ಜಯದಲ್ಲಿ ವಿನಯವನ್ನು ಕಲಿಸುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ ನಡೆಸಿ, ಬಳಿಕ ಮೈದಾನಕ್ಕೆ ತೆರಳಲು ಯತ್ನಿಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಸಹಿತ 38 ಮಂದಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.
ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಮಾ.20ರಿಂದ 22ರವರೆಗೆ ಮೂರು ದಿನ ಕಾಲ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆ ನಡೆಸಿದರು.
ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತದಾರರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ನಾವೆಲ್ಲರೂ ಕಟಿಬದ್ಧರಾಗಿ ಪಾಲ್ಗೊಳ್ಳಬೇಕು. ದೇವಸ್ಥಾನದ ಭೂಮಿ ಹಾಗೂ ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯಬೇಕು ಎಂದು ದೇವಸ್ಥಾನದ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ಕರೆನೀಡಿದರು.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ […]