Showing 20 of 3077 posts • Page 30 of 154
ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಮತ್ತು ವಾಣಿಜ್ಯ ಸಿಲಿಂಡರ್ ಗಳ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಇವತ್ತು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ ಗೆ ಸಾಗಿದ ಕಾರ್ಯಕರ್ತರು ಅಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.
ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.
ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ದನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಹೇಳಿದರು.
ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್(55)ಅಲ್ಪ ಕಾಲದ ಅನಾರೋಗ್ಯದಿಂದ ಮಾ.7 ರಂದು ರಾತ್ರಿ ನಿಧನ ಹೊಂದಿದರು.
ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳದ ಶಂಕುಸ್ಥಾಪನೆ ನಡೆದಿತ್ತು. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು.ಇದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಯ ಎಲ್ಲಾ ಯೋಜನೆಗೆ ಅನುದಾನ ನೀಡಿದ್ದು ಯುವನಿಧಿಗೆ ಮಾತ್ರ ಒಂದು ಪೈಸೆಯು ನೀಡಿಲ್ಲ.
ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್: ಮಾ.17ಕ್ಕೆ ಉಡುಪಿಯಲ್ಲಿ “ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳ”
ಮಲ್ಪೆ ಬಂದರಿನ ದಕ್ಕೆಯ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಡಿಜಿಟಲ್ ಪಾಲಿಸಿ ರೂಪಿಸಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ ಎಂದು ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಹೇಳಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವ 2026ರ ಲಾಂಛನವನ್ನು ಶಾಸಕ ಯಶ್ಪಾಲ್ ಸುವರ್ಣ ದೇವಸ್ಥಾನದಲ್ಲಿ ಅನಾವರಣಗೊಳಿಸಿದರು.
ಕಾರ್ಕಳ ತಾಲೂಕಿನ ಸಾಣೂರು ಸೇಣರಬೆಟ್ಟು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ “ಕೋಟಿಚೆನ್ನಯ ಜೋಡುಕರೆ ಕಂಬಳ”ದ ನೂತನ ಕಂಬಳ ಕರೆ ನಿರ್ಮಾಣದ ಭೂಮಿಪೂಜೆ ಗುರುವಾರ ಸಾಣೂರು ಸೇಣರಬೆಟ್ಟು ಎಂಬಲ್ಲಿ ನಡೆಯಿತು.
ವಾರಾಹಿ ನದಿಯನ್ನು ಅವಲಂಬಿಸಿರುವ ರೈತರ ಹಕ್ಕುಗಳಿಗೆ ಆದ್ಯತೆ ನೀಡಬೇಕು. ವಾರಾಹಿ ಮೂಲ ಯೋಜನೆಯಂತೆ ನೀರಿನ ಹಂಚಿಕೆಯನ್ನು ಖಚಿತಪಡಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ಒಟ್ಟು ಏಳು ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಂಡ್ಲೂರಿನಿಂದ ಸಿದ್ಧಾಪುರದವರೆಗೆ ಎರಡು ದಿನಗಳ ಕಾಲ ‘ನೀರಿಗಾಗಿ ನಮ್ಮ ನಡಿಗೆ’ ಪಾದಯಾತ್ರೆ ನಡೆಯಿತು.
ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು.
ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು
ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.