Showing 20 of 3077 posts • Page 31 of 154
ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಇಂದು ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಬ್ರಹ್ಮಾವರ ತಾಲೂಕು ಸಂಘದ ಉಪಾಧ್ಯಕ್ಷ ಮತ್ತು ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ವರದಿಗಾರ ಶೇಷಗಿರಿ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಮೊದಲನೆಯ ದಿನ ಮಾ. 4ರಂದು ಸಂಜೆ 6ಗಂಟೆಗೆ ಹಿರಿಯ ರಂಗಕರ್ಮಿ, ನಾಟಕಕಾರ ಪ್ರಸನ್ನ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುಡುಗಿದ್ದಾರೆ.
ಬಳ್ಳಾರಿಯಿಂದ ಕಬ್ಬಿಣದ ಪೈಪುಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಮಾಳ ಘಾಟಿಯಲ್ಲಿ ಅಡ್ಡ ಬಿದ್ದು ಅಪಘಾತ ಸಂಭವಿಸಿದೆ.
80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕರೆ ಭೂಮಿ ಕಂಬಳ ಸಮಿತಿಗೆ ಹಸ್ತಾಂತರವಾಗಿಲ್ಲ. ಆದ್ದರಿಂದ ಫೆ.28ರಂದು ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು ನಡೆದಿದೆ.
ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರದು ಎಷ್ಟು ದಾಖಲೆಯ ಬಜೆಟ್ ದಾಖಲೆಗೆ ಯಾರು ಅಡ್ಡಿ ಮಾಡುತ್ತಾರೆ ಕಾಂಗ್ರೆಸ್ ತೀರ್ಮಾನ ಮಾಡಬೇಕು. ಕುರ್ಚಿಯ ಕಾದಾಟಕ್ಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದರು.
ಕಂಬಳ ವಿವಾದ ವಿಚಾರವಾಗಿ ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿ ದಿನ ನಿಗದಿ ಮಾಡಿದ್ದಾರೆ. ಸ್ವಂತ ಹಣವನ್ನು ಖರ್ಚು ಮಾಡಿ ಕಂಬಳ ಮಾಡುತ್ತಿದ್ದಾರೆ. ವಿನಾಕಾರಣ ರಾಜಕಾರಣ ಬೆರಿಸಲಾಗಿದೆ. ಕಾಂಗ್ರೆಸ್ ಮತ್ತು ಮಾಜಿ ಸಚಿವರು ಈ ಕೆಲಸ ಮಾಡಿದ್ದಾರೆ. ಕಂಬಳದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೆಲಸ ಮಾಡುತ್ತಾರೆ ಎಂದರು.
ಹೊಡೆಯ ಕಡಲ ಕಿನಾರೆ ಸಮೀಪವಿರುವ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ನಿಷೇಧಾಜ್ಞೆ ಮಧ್ಯೆಯೇ ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್ ನೀಡಿದ ದೂರಿನಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ.
ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ (ಟಿಟಿ) ವಾಹನವೊಂದು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ರಿಫಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು.
ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟದ ಮಧ್ಯೆಯೇ ಉಡುಪಿ ಕಂಬಳದ ಶಂಕುಸ್ಥಾಪನೆ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆ ಇಂದು ನೆರವೇರಿತು.
ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದಲ್ಲಿ 6.30 ಎಕರೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಮೀನಿನಲ್ಲಿ ಉಡುಪಿ ಕಂಬಳ ಆಯೋಜನೆ ಸಂಬಂಧ ಫೆ.28ರ ಬೆಳಗ್ಗೆ 10 ಗಂಟೆಗೆ ಶಂಕುಸ್ಥಾಪನೆ ಮಾಡಲು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುಂದಾಗಿದ್ದರು.
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.