Showing 20 of 3077 posts • Page 32 of 154
ಕಚೇರಿಗಳ ಭೇಟಿ ಮಾಡಿ ನನಗೆ ಬಹಳ ನೋವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಗಲೀಜು ಹಾಕಲು ಓಪನ್ ಡ್ರಮ್ ಇಟ್ಟಿದ್ದಾರೆ. ಪ್ರತ್ಯೇಕ ಡಸ್ಟ್ ಬಿನ್ ಇರಿಸಲು ಸೂಚಿಸಲಾಗಿದೆ. ತಾಲೂಕು ಕಚೇರಿಯಲ್ಲಿ ತುಂಬಾ ಕೇಸುಗಳು ಪೆಂಡಿಂಗ್ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳದ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದಾರೆ.
ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ ಫೆ.28ರಿಂದ ಮಾ.2ರವರೆಗೆ ಉಡುಪಿಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ಗ್ಯಾಲರಿ ದೃಷ್ಠಿಯಲ್ಲಿ ನಡೆಯಲಿದೆ ಎಂದು ಫೋರಂ ಅಧ್ಯಕ್ಷ ರಮೇಶ್ ರಾವ್ ತಿಳಿಸಿದರು.
ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಫೋಸ್ಟ್ ನ್ನು ಹಾಕಿದ ಬಿಂದು ಸಿರ ಎಂಬ ಮಹಿಳೆ ವಿರುದ್ಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಫೆ. 28 ಮತ್ತು ಮಾರ್ಚ್ 1ರಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ದಯಾನಂದ ಕರ್ಕೇರ ತಿಳಿಸಿದರು.
ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.
ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ವತಿಯಿಂದ “ಮರಾಟಿ ಹೋಳಿ ಸಂಭ್ರಮ -2026” ಅನ್ನು ಇದೇ ಮಾರ್ಚ್ 1ರಂದು ಸಂಜೆ 4ಗಂಟೆಗೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಮುಂಡ್ಕಿನಜೆಡ್ಡು ಆರ್.ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದರು.
ಬೆಂಗಳೂರು- ಮಾಡ್ಗಾಂವ್ ಮಾರ್ಗದಲ್ಲಿ ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲು ಕೆಲ ಲಾಬಿ ನಡೆಯುತ್ತಿದೆ. ಮಂಗಳೂರಿನ ಸಿಟಿ ಒಳಗೆ ರೈಲು ಸಂಚಾರ ಮಾಡುವಂತೆ ಒತ್ತಡ ತರಲಾಗುತ್ತಿದ್ದು, ಇದರಿಂದ ರೈಲಿನ ಸಂಚಾರದಲ್ಲಿ ಬಹಳಷ್ಟು ವಿಳಂಬವಾಗಲಿದೆ. ದೂರದ ಪ್ರಯಾಣಿಕರಿಗೆ ಬಹಳಷ್ಟು ತೊಂದರೆ ಆಗಲಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್ ತಿಳಿಸಿದರು.
ಹಾಲು ಉತ್ಪಾದಕರ ಸಂಘದಲ್ಲಿ ಈ ಹಿಂದೆ ಕಳಪೆ ಗುಣಮಟ್ಟದ ಹಾಲನ್ನು ಸ್ವೀಕರಿಸದೆ ತಿರಸ್ಕಾರ ಮಾಡಲಾಗುತ್ತಿತ್ತು. ಮುಂದಿನ ಹಂತದಲ್ಲಿ ಕೆಳಪೆ ಗುಣಮಟ್ಟದ ಹಾಲನ್ನು ಕೂಡ ಸ್ವೀಕರಿಸಲು ಸಂಘದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ಅವರಿಗೆ ಸರಕಾರದ 5ರೂ. ಅನುದಾನ ಇರುವುದಿಲ್ಲ ಹಾಗೂ ದರದಲ್ಲಿಯೂ ವ್ಯಾತ್ಯಾಸ ಇರುತ್ತದೆ ಎಂದು ದ.ಕ ಹಾಲು ಸಹಕಾರಿ ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು.
‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳಕ್ಕೆ ಆಗಮಿಸಿದರು.
ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಕೇವಲ 11ಗಂಟೆಗಳಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆದಿಮ ಕಲಾ ಟ್ರಸ್ಟ್ (ರಿ.), ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ರವರಿಗೆ, ಆದಿಮ ಕಲಾ ರತ್ನ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯಂತ ಸಂತೋಷ ಮತ್ತು ಸಂಭ್ರಮದಿಂದ ಕೊಡಮಾಡುತ್ತಿದೆ. ಈ ಪ್ರಶಸ್ತಿಯು ರೂ.25.000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು.
ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ ಸುರೇಶ ಲಮಾಣಿ (20) ಎನ್ನುವ ಯುವತಿಯು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಮಾಡಿ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ ಯೋಜನೆ)ಯ ಹೆಸರು ಬದಲಾವಣೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗಷ್ಟೇ ಕರಾವಳಿಯ ಅತ್ಯಂತ ಹಿಂದುಳಿದ ಸಮುದಾಯವಾದ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿ, ಕೊರಗ ಬಂಧುಗಳೊಂದಿಗೆ ಊಟೋಪಚಾರ, ಸಂವಾದ ನಡೆಸಿ ಸುದ್ದಿಯಾಗಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಇದೀಗ ಎಸ್ಸಿ ಕಾಲನಿಯಲ್ಲಿ ಸಹಭೋಜನ ನಡೆಸಿದ್ದಾರೆ.