Showing 20 of 3077 posts • Page 33 of 154
ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.
ರಾಜ್ಯದಲ್ಲಿ ಪವರ್ ಶೇರಿಂಗ್ ವಿವಾದ ವಿಚಾರವಾಗಿ ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದರು. ಜನರಿಗೆ ಒಳ್ಳೆಯ ಸರಕಾರ ಬೇಕು. ಭ್ರಷ್ಟಾಚಾರ ರಹಿತ ಸದೃಢ ಸರಕಾರ ಬೇಕು. ಗ್ಯಾರಂಟಿ ಕಾರ್ಯಕ್ರಮಗಳಿಂದ ಬಡವರಿಗೆ ಅನುಕೂಲವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರ ಹಸಿವು ಮುಕ್ತ ಮಾಡಿದೆ ಎಂದರು.
ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಇದೇ ಫೆ. 25ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ತಿಳಿಸಿದರು.
ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.
ಕರಾವಳಿ ಭಾಗದಲ್ಲಿ ಬೆಳೆಯುವ ಬಾಳೆ ಎಲೆಗಳಿಗೆ ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿದೆ. ವಿಶೇಷವಾಗಿ ಹಬ್ಬ -ಜಾತ್ರೆ, ಮದುವೆ ಸಮಾರಂಭ ಮತ್ತು ದೇವಸ್ಥಾನಗಳ ಅನ್ನಸಂತರ್ಪಣೆ ಕಾರ್ಯಕ್ರಮ ಗಳ ಸಂದರ್ಭಗಳಲ್ಲಿ ಕೇರಳದ ವ್ಯಾಪಾರಿಗಳು ಕರಾವಳಿಯತ್ತ ಮುಖ ಮಾಡುತ್ತಿದ್ದಾರೆ.
ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ.
ಅರಣ್ಯ ಇಲಾಖೆ ಇರಿಸಿದ ಬೋನಿಯಲ್ಲಿ ಚಿರತೆಯೊಂದು ಸೆರೆಯಾದ ಘಟನೆ ಭಾನುವಾರ ಬೆಳಗ್ಗಿನ ಜಾವ ಮಣಿಪುರ ಗ್ರಾಮದ ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ನಡೆದಿದೆ.
1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಇದು ಜಗತ್ತಿನಲ್ಲಿ ಬೈಬಲ್ ನಂತರದಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ ಎಂದು ಪ್ರಗತಿಪರ ಚಿಂತಕರಾದ ಫಣಿರಾಜ್ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ದಕ್ಷಿಣ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಗರದ ಜೋಡುಕಟ್ಟೆಯ ಬಳಿ ಪ್ರತಿಭಟನೆ ನಡೆಸಿ ಬಳಿಕ ರಸ್ತೆತಡೆ ನಡೆಸಲಾಯಿತು.
ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಲ್ಪೆ ಬಂದರು ಸಮೀಪ ಖಾರದ ಪುಡಿ ಎರಚಿ ಮೀನು ವ್ಯಾಪಾರಿಗೆ ಹಲ್ಲೆ ಮಾಡಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ, ಬಜಗೋಳಿ ಪರಿಸರದಲ್ಲಿ ಶನಿವಾರ ಸಂಜೆ ಅಕಾಲಿಕ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಚಿತ ಸಿಟಿ ಸ್ಕ್ಯಾನ್ ಸೇವೆ ಬಂದ್ ಬಡರೋಗಿಗಳ ಸಂಕಷ್ಟ ಎದುರಾಗಿದ್ದು, ಉಡುಪಿ ಜಿಲ್ಲಾಸ್ಪತ್ರೆಯಲ್ಲೂ ಸಿಟಿ ಉಚಿತ ಸ್ಕ್ಯಾನಿಂಗ್ ಸೇವೆ ಬಂದ್ ಮಾಡಲಾಗಿದೆ.
ಬಾಡಿಗೆ ಮನೆ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂರು ಮಂದಿ ಯುವಕರ ತಂಡವೊಂದು ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಶಂಕರಪುರದಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25ರಂದು ಜಿಲ್ಲೆಗೆ ಆಗಮಿಸಿ, ಕಾರ್ಕಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿರುವ 14ನೇ ವರ್ಷದ ನಾಟಕೋತ್ಸವ ‘ರಂಗಹಬ್ಬ–14’ ಫೆಬ್ರವರಿ 22ರಿಂದ 28ರವರೆಗೆ ಉಡುಪಿಯ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ವತಿಯಿಂದ 300ನೇ ರಕ್ತದಾನ ಶಿಬಿರ “ಹೆಗ್ಗುರುತು- 300” ಅನ್ನು ಇದೇ ಫೆ. 22ರಂದು ಬೆಳಿಗ್ಗೆ 8.30ರಿಂದ 1ಗಂಟೆಯವರೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದರು.
ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಟಯರ್ ಸ್ಫೋಟಗೊಂಡು ಲಾರಿಯೊಂದು ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ.