Showing 20 of 3077 posts • Page 34 of 154
ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ.
ಶ್ರೀ ಕೃಷ್ಣಮಠ ಪರಿಸರದ ರಥಬೀದಿಯಲ್ಲಿರುವ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನಗೊಂಡಿತು.
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರ ನೇತೃತ್ವದಲ್ಲಿ ಗಣಹೋಮ, ನವಕ ಪ್ರಧಾನ ಹೋಮ, ಮಹಾಪೂಜೆ ನೆರವೇರಿತು. ಮಧ್ಯಾಹ್ನ ರಥೋತ್ಸವ ನಡೆದ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಘಟನೆ ಉಡುಪಿ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.
ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.
ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಇದರಿಂದ ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದ ಒಳಾಂಗಣದಲ್ಲಿ ಹಾವೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಯಾಯಿತು. ತಕ್ಷಣ ಬಾಲಮಂದಿರದ ಮೇಲ್ವಿಚಾರಕರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು.
ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ‘ಆಶ್ಲೇಷ ಆನ್ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
ಕುಡಿದ ಮತ್ತಿನಲ್ಲಿ ಅತೀ ವೇಗದಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಮಣಿಪಾಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿಯಲ್ಲಿ ಬದಿಯಲ್ಲಿ ಸಂಭವಿಸಿದೆ.
ದುರ್ಬಲ ಸಮುದಾಯದ ಏಳಿಗೆಗೆ ಶ್ರಮಿಸುವ ಕಾರ್ಯ ಭಗವಂತನಿಗೆ ಸಲ್ಲಿಸುವ ಭಕ್ತಿಯಷ್ಟೆ ಶ್ರೇಷ್ಠವಾದದ್ದು ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿ, 4,90,920 ನಗದು ಸೇರಿದಂತೆ ವಾಹನಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಎನ್ ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್ಐಆರ್ ಕಡ್ಡಾಯ ಜಾರಿ ವಿಚಾರವಾಗಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಎಸ್ಐಆರ್ ಗೆ ತೊಂದರೆ ನೀಡಬಾರದು ಎಂದು ಹೇಳಿದೆ.
ಕರಾವಳಿಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ವಿಚಾರವಾಗಿ ಶಾಸಕ ಬಸವಣಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಅಧಿವೇಶನದಲ್ಲಿ ವಿಪರೀತ ವರ್ತನೆಗೆ ರಾಹುಲ್ ಗಾಂಧಿಯನ್ನು ಯತ್ನಾಳ್ ಟೀಕಿಸಿದರು. ರಾಹುಲ್ ಗಾಂಧಿ ಒಬ್ಬ ಅಪ್ರಾಪ್ತ ಬುದ್ಧಿಹೀನ. ಸದನದಲ್ಲಿ ಚರ್ಚೆ ಮಾಡೋಲ್ಲ ಅಂದ್ರೆ ಹೇಗೆ. ಬಿಡುಗಡೆಯಾಗದ ಪುಸ್ತಕದ ಬಗ್ಗೆ ಮಾತನಾಡುತ್ತಾರೆ. ನೆಹರು ಮನೆತನದ ಹಗರಣಗಳು ಸೆಕ್ಸ್ ಹಗರಣಗಳು ಸಾಕಷ್ಟು ಈ ದೇಶದಲ್ಲಿ ಇದೆ ಎಂದರು.
ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ ವಿಚಾರವಾಗಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ!
ಅನಂತ್ ಕುಮಾರ್ ಹೆಗಡೆ ರಾಜ್ಯರಾಜಕಾರಣಕ್ಕೆ ಮರಳುವ ವಿಚಾರವಾಗಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಅನಂತ್ ಕುಮಾರ್ ಹೆಗಡೆ ವೈಯಕ್ತಿಕವಾಗಿ ಎಲ್ಲೂ ಪ್ರತಿಕ್ರಿಯೆ ಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದೆಹಲಿಗೆ ಬುಲಾವ್ ಎಂದು ಹೇಳುತ್ತಿದ್ದಾರೆ ಎಂದರು.