Showing 20 of 3085 posts • Page 41 of 155
ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶಿರೂರು ಮಠದ ಪರ್ಯಾಯ ಮಹೋತ್ಸವ ಆರಂಭವಾಗಿದೆ. ಉಡುಪಿ ಕೃಷ್ಣನ ದರ್ಶನವನ್ನು ಇನ್ನು ಮುಂದೆ ಸುಲಭವಾಗಿ ಮಾಡಬಹುದು.
ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ ಚರ್ಚಿನ ಧರ್ಮಗುರು ವಂ|ವಿರೇಶ್ ಮೋರಾಸ್ ಅಭಿಪ್ರಾಯಪಟ್ಟರು.
ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ.
ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಫ್ಸ್ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ. ಗೋಪಾಲ (86) ಅನಾರೋಗ್ಯದಿಂದ ಜ.19ರಂದು ನಿಧನ ಹೊಂದಿದರು.
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ.
ಪುತ್ತಿಗೆ ಮಠದ ಪರ್ಯಾಯದ ಕೊನೆಯ ದಿನವಾದ ಶನಿವಾರ ಸಂಪ್ರದಾಯದಂತೆ ಪಾಕಶಾಲೆಯಲ್ಲಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಭಕ್ತರು ಸೂರೆ ಮಾಡಲು (ಕೊಂಡೊಯ್ಯಲು) ಅವಕಾಶ ನೀಡಲಾಯಿತು.
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೊದಲ ಮಹಾಪೂಜೆ ನಡೆಸಿದರು.
ಪ್ರಥಮ ಬಾರಿಗೆ ಕೃಷ್ಣಪೂಜಾ ದೀಕ್ಷೆ ಪಡೆದು ಪರ್ಯಾಯ ಸ್ವೀಕರಿಸಿದ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಸರ್ವಜ್ಞಪೀಠಾರೋಹಣ ಮಾಡಿದರು.
ಶೀರೂರು ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಭಾನುವಾರ ಬೆಳಗಿನ ಜಾವ ವಿಜೃಂಭಣೆಯಿಂದ ನಡೆದಿದ್ದು ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.
ಶೀರೂರು ಪರ್ಯಾಯ ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಲಾದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪುತ್ತಿಗೆ ಪರ್ಯಾಯ ಮಂಗಳೋತ್ಸವ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಮಂಗಳಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪೊಡವಿಗೊಡೆಯ ಶ್ರೀಕೃಷ್ಣನ ಉತ್ಸವವನ್ನು ಸಪ್ತರಥೋತ್ಸವ (ಏಳುರಥ)ದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶೀರೂರು ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು,
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಶೀರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ಜನವರಿ 17 ರಂದು ಬೆಳಿಗ್ಗೆಯಿಂದ ರಾತ್ರಿಯ ತನಕ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷರಾದ ಯತೀಶ್ ಕರ್ಕೇರಾ ಹೇಳಿದರು.
ತಮ್ಮ ಕ್ರಾಂತಿಕಾರಕ ಚತುರ್ಥ ಪರ್ಯಾಯವನ್ನು ವೈಭವಯುತವಾಗಿ, ಯಶಸ್ವಿಯಾಗಿ ಸಮಾಪನಗೊಳಿಸುತ್ತಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಪರ್ಯಾಯ ಸ್ವಾಗತ ಸಮಿತಿ ಮತ್ತು ಭಕ್ತಾಭಿಮಾನಿಗಳು ರಾಜಾಂಗಣದಲ್ಲಿ ‘ಯತಿಕುಲ ಚಕ್ರವರ್ತಿ ಬಿರುದು ನೀಡಿ ಅಭಿನಂದಿಸಲಾಯಿತು.
ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ ಏಳು ಮಠಗಳಿಗೆ ಒಲಿಪೆ ನೀಡುವ ಸಂಪ್ರದಾಯ ನಡೆದುಕೊಂಡು ಬಂದಿದೆ.
ಅಂಬಾಗಿಲು ಜಂಕ್ಷನ್ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಪರಶುರಾಮ ಸ್ವಾಗತ ಗೋಪುರದ ಭೂಮಿ ಪೂಜೆಯನ್ನು ಭಾವಿ ಪರ್ಯಾಯ ಪೀಠಾಧಿಪತಿ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ನೆರವೇರಿಸಿದರು.