Showing 20 of 2862 posts • Page 8 of 144
ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ (ಎಫ್ಐಪಿ) ಅಡಿಯಲ್ಲಿ ಸ್ಮಾಲ್ ಪೆಲಾಜಿಕ್ ಪರ್ಸ್ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್ನಲ್ಲಿ ನಡೆಯಿತು.
ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ಮಲ್ಪೆ ಇದರ ವತಿಯಿಂದ ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ ಹಾಗೂ ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳ ಅವರ ಸಂಕಲ್ಪದಂತೆ, ಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ ‘ಶ್ರೀಆನಂದ ಶರಧಿ’ ಎಂಬ ಪ್ರತಿಷ್ಠಾನದ ನೂತನ ನಿವೇಶನದಲ್ಲಿ ಮೇ 15 ರಿಂದ ಮೇ 31 ರವರೆಗೆ “ಬೃಹತ್ ಕೃಷಿ ಮೇಳ, ಭಜನಾ ಕಮ್ಮಟ ಹಾಗೂ ಮಾತೃ ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ವಿಜಯ ಕೊಡವೂರು ತಿಳಿಸಿದ್ದಾರೆ
ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.
ಟ್ರಾಕ್ಟರ್ ಟಿಲ್ಲರ್ ವಾಹನ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಉಡುಪಿಯ ಕೊಕ್ಕರ್ಣೆ ಮೊಗವೀರ ಪೇಟೆ ಬಳಿ ನಡೆದಿದೆ. ಮೃತರನ್ನು ಪಕೀರಪ್ಪ ಎಂದು ಗುರುತಿಸಲಾಗಿದೆ.
ಬಸ್ ಪ್ರಯಾಣದ ವೇಳೆ ತಮಗೆ ಆದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಇಂದಿನ ಪ್ರಪಂಚದಲ್ಲಿ ಮರ, ಬೀಜದ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ. ಆದರೆ ಭೂಮಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರತಿಯೊಂದು ಬೀಜದಲ್ಲೂ ಮರವಾಗುವ ಶಕ್ತಿ ಹಾಗೂ ಗುಣ ಇದೆ.
ಕನ್ನಡ ಭಾಷೆಯ ಬಳಕೆಯಲ್ಲಿ ಬಹಳಷ್ಟು ವಿವಿಧ ಕನ್ನಡ ಪ್ರಕಾರಗಳಿವೆ. ನಾವು ಮಾತಾನುಡುವುದು ಕನ್ನಡ ಪುಸ್ತಕದ ಕನ್ನಡ. ಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ
ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ ಘಟನೆ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲದ ವಾರ್ಷಿಕ ಸಿರಿ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.
ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದೆ.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಇದೇ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ಪಿ ಹೇಳಿದರು.
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ.
ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.
“ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು.
ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.