Showing 20 of 3075 posts • Page 8 of 154
ಸರ್ಕಾರದ ಅಮೂಲ್ಯ ಆಸ್ತಿಯೊಂದು ನಿರ್ಲಕ್ಷ್ಯದ ಕಾರಣದಿಂದ ಇಂದು ಪಾಳು ಬಿದ್ದಿದೆ.
ಜಿಲ್ಲೆಯ ಉದ್ಯಾವರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರ ಮೇಲಿನ ಸೇತುವೆ ಇದೀಗ ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಸ್ಥಳವಾಗಿ ಮಾರ್ಪಡುತ್ತಿದೆ.
ಖಾಸಗಿ ಬಸ್ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.
ಅಯೋಧ್ಯೆಯ ರಾಮಮಂದಿರ ಹುಂಡಿ ಹಣ ದುರುಪಯೋಗ ವಿಷಯದಲ್ಲಿ ಯಾರೂ ಮೌನವಾಗಿಲ್ಲ. ರಾಮಮಂದಿರ ಹಿಂದೂಗಳ ಶ್ರದ್ಧಾಕೇಂದ್ರವಾಗಿದ್ದು, ಅಲ್ಲಿ ನಡೆದಿರುವ ಘಟನೆ ದೇಶಕ್ಕೂ, ಬಿಜೆಪಿಗೂ ಹಾಗೂ ಸಂಘ ಪರಿವಾರಕ್ಕೂ ನೋವುಂಟು ಮಾಡಿದೆ.
ಸಮುದ್ರದಿಂದ ಹಿನ್ನೀರಿಗೆ ಬಂದಿದ್ದ ಬೃಹತ್ ಡಾಲ್ಫಿನ್ವೊಂದು ಹಿನ್ನೀರಿನಲ್ಲೇ ಸಿಲುಕಿ ಪರದಾಡಿದ ಘಟನೆ ಜಿಲ್ಲೆಯ ಪಡುಕರೆ–ಕುತ್ಪಾಡಿ ಸಮುದ್ರ ತೀರದಲ್ಲಿ ನಡೆದಿದೆ.
: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್ಐಆರ್ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಕರಾವಳಿ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲವೇ. ಹೀಗೆ ಒಂದುಪ್ರಶ್ನೆ ಕರಾವಳಿ ಭಾಗದಲ್ಲಿ ಕೇಳಿ ಬರುತ್ತಿದೆ.
ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ.
ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು.
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.
ದೇಶದಲ್ಲಿ ಸಹಕಾರಿ ಕ್ಷೇತ್ರ ಕ್ರಾಂತಿಕಾರಿ ಕೆಲಸ ಮಾಡುತ್ತಿದೆ. ವಾಣಿಜ್ಯ ಬ್ಯಾಂಕ್ಗಳಿಗೆ ಸಮಾನಾಂತರವಾಗಿರುವ ಸಹಕಾರಿ ಕ್ಷೇತ್ರವು ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಬಹಳಷ್ಟು ಸಹಕಾರ ನೀಡುತ್ತಿದೆ.
ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ಇಂದಿಗೂ ಬಳಕೆಗೆ ಲಭ್ಯವಾಗದೇ ನಿರುಪಯುಕ್ತವಾಗಿ ಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಿದ್ದ ವಿಶ್ರಾಂತಿ ಕೊಠಡಿಯೂ ಪಾಳುಬಿದ್ದಿದ್ದು, ಮೂಲಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛೋಲಿಕೆ ಪೀಚೆ ಕ್ಯಾಹೆ ಡ್ಯಾನ್ಸ್ ಮಾಡಲಾಯಿತು. ಕುಂದಾಪುರ ತಾಲೂಕಿನ ಆನೆಗುಡ್ಡೆ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಕಾರ್ಯಕ್ರಮ ನಡೆಯಿತು.
ಪತ್ನಿ ಜೊತೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು.
ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನಗರದ ತುಂಬಾ ಟ್ರಾಫಿಕ್ ಜಾಮ್ ಆಗಿದ್ದು, ಸಾಲು ಸಾಲು ರಜೆಗಳ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.
ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಈಡಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಮತ್ತೆ ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ.