Showing 20 of 3075 posts • Page 9 of 154
ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ (NH169A) ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಇಂದಿನ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ, ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿಶಿಷ್ಟ ಪ್ರಯತ್ನವೊಂದು ಉಡುಪಿಯಲ್ಲಿ ನಡೆದಿದೆ.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮೂವರು ರೌಡಿ ಶೀಟರ್ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಬದಕೋಣೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವಕ್ಕೆ ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಸಿಟ್ಟಿದ್ದ ಶವದ ಗೌರವಯುತ ಅಂತ್ಯಸಂಸ್ಕಾರವನ್ನು ನಗರದ ಬಿಡಿನಗುಡ್ಡೆ ದಹನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹೇಶ್ ಮರ್ಣೆ ಅಪರೂಪದ ಕಲಾವಿದ. ಅಶ್ವತ್ಥ ಎಲೆಯಲ್ಲಿ ಇವರು ಖ್ಯಾತನಾಮರ ಭಾವಚಿತ್ರಗಳನ್ನು ಮೂಡಿಸಿ ಹೆಸರು ಮಾಡಿದ್ದಾರೆ. ಅದೇ ರೀತಿ ವಿವಿಧ ಸಂದರ್ಭಗಳಲ್ಲಿ ಕಲೆಯ ಮೂಲಕ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.
ಕಾಡಬೆಟ್ಟುವಿನ ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧ ಶ್ರೀ ಅಬ್ಬರದರಗ ವೀರಭದ್ರ ಸಹಪರಿವಾರ ಹಾಗೂ ಶ್ರೀ ಶನೈಶ್ಚರ ದೇವಸ್ಥಾನದ ಜೀಣೋರ್ದ್ಧಾರ ಅಂಗವಾಗಿ ಜೂನ್ 27ರಂದು ಶನಿವಾರ ತ್ರಯೋದಶಿ ತಿಥಿಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷವಾಗಿ ನವಗ್ರಹ ಸಹಿತ ಸಾಮೂಹಿಕ ಶ್ರೀ ಶನಿಶಾಂತಿ ಹೋಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ತಂತ್ರಿ, ಹಿರಿಯ ವಿದ್ವಾಂಸ ಕುಮಾರಗುರು ತಂತ್ರಿ ತಿಳಿಸಿದರು
ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಮೈಸೂರು ಪಬ್ನಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲಕರಿಗೆ ಅಗ್ನಿ ಅವಘಡ ಸಂಭವಿಸ ದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಾರ್ಯಾಗಾರವನ್ನು ಉಡುಪಿ ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸಹಕಾರಿ ಸಂಘಗಳ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತರಬೇತಿ ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಜಿಲ್ಲೆಯಲ್ಲಿ ಎಲ್ಲಾ ವಗದ ಸಹಕಾರಿಗಳಿಗೆ ನಿರಂತರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು. ನಮಗೆ ಈ ಅವಕಾಶ ಒದಗಿ ಬಂದಿದೆ.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.