ಹೊಸದಿಲ್ಲಿ: ಚೆಕ್ ಬೌನ್ಸ್ ಪ್ರಕರಣ ಎದುರಿಸುತ್ತಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ರಾಜ್ಕುಮಾರ್ ಸಂತೋಷಿ ಅವರಿಗೆ ಗುಜರಾತ್ನ ಜಾಮ್ನಾನಗರ್ನ ಸ್ಥಳೀಯ ನ್ಯಾಯಾಲಯ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜತೆಗೆ ದೂರುದಾರರಿಗೆ ₹2 ಕೋಟಿ ಹಣ ಪಾವತಿಸುವಂತೆ ಆದೇಶಿಸಿದೆ.
ಕೈಗಾರಿಕೋದ್ಯಮಿ ಅಶೋಕ್ ಲಾಲ್ ಎನ್ನುವವರು 2017ರಲ್ಲಿ ಸಂತೋಷಿ ವಿರುದ್ಧ ದೂರು ನೀಡಿದ್ದರು. ಸಿನಿಮಾ ನಿರ್ಮಾಣಕ್ಕೆ ಸಂತೋಷಿಗೆ ₹1 ಕೋಟಿ ಸಾಲವಾಗಿ ನೀಡಲಾಗಿತ್ತು, ಅದನ್ನು ತೀರಿಸಲು ಅವರು ತಲಾ ₹10 ಲಕ್ಷ ಮೊತ್ತದ 10 ಚೆಕ್ಗಳನ್ನು ನೀಡಿದ್ದರು. ಆದರೆ ಎಲ್ಲಾ ಚೆಕ್ಗಳು ಬೌನ್ಸ್ ಆಗಿದ್ದವು. ಹೀಗಾಗಿ ಕೋರ್ಟ್ ಮೂಲಕ ನೋಟಿಸ್ ಜಾರಿಗೊಳಿಸಲಾಗಿತ್ತು, ಆದರೆ ಅವರು ಹಣ ನೀಡಲು ವಿಫಲರಾಗಿದ್ದರು ಎಂದು ತಿಳಿಸಿದ್ದಾರೆ.
ರಾಜ್ಕುಮಾರ್ ಸಂತೋಷಿ ಅವರು ಬಾಲಿವುಡ್ನಲ್ಲಿ. ‘ಗಾಂಧಿ ಗೋಡ್ಸೆ- ಏಕ್ ಯುದ್ಧ್’, ‘ಘಾಯಲ್’, ‘ಘಾಟಕ್’ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದಾರೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…