ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೆ ನಮ್ಮ ಸರ್ವೋಚ್ಛ ನಾಯಕರು. ಅವರೇ ಹಾಸನ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎಂದು ಮಾಜಿ ಸಚಿವ ಎಚ್ ಡಿ.ರೇವಣ್ಣ ತಿಳಿಸಿದರು.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೇಕೆರೆ ಜಾತ್ರೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ವರಿಷ್ಠರಾದ ದೇವೇಗೌಡರಿಗೆ ೬೦ ವರ್ಷ ರಾಜಕೀಯ ಅನುಭವ ಇದೆ. ಅವರೇ ಕಳೆದ ಹಲವು ಚುನಾವಣೆ ಗಳಲ್ಲಿ ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ಅಂತಿಮಗೊಳಿಸಿದ್ದಾರೆ. ಈ ಬಾರಿಯೂ ಅವರ ಮಾತೇ ಅಂತಿಮ, ಅವರ ಮಾತನ್ನು ಮೀರಿ ನಾನು ಹೋಗಲ್ಲ, ನಾನು ಹಿಂದಿನಿಂ ದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ.
ದೇವೇಗೌಡರು ಏಳು ಕ್ಷೇತ್ರಗಳ ಟಿಕೆಟ್ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ ಹಿಂದೆ ಯೂ ಅವರ ಮಾತು ಕೇಳಿದ್ದೇನೆ ಈಗಲೂ ಕೇಳುತ್ತೇನೆ ಮುಂದೆಯೂ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ನನ್ನ ಕ್ಷೇತ್ರ ಹೊಳೆ ನರಸಿಪುರ ಅಲ್ಲಿನ ಜನ ನನ್ನನ್ನು ೩೦ ವರ್ಷದಿಂದ ಸಾಕಿದ್ದಾರೆ. ನಾನ್ಯಾಕೆ ೨ ಕ್ಷೇತ್ರಗಳಲ್ಲಿ ನಿಲ್ಲಲಿ. ನನ್ನ ಮೊದಲ ಪ್ರಿಯರಿಟಿ ಹೊಳೆನರಸೀಪುರ. ನನ್ನ ಜನರನ್ನು ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ ರೇವಣ್ಣ ಅವರು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದರು.
ಶಕುನಿಗಳು ನಮ್ಮ ಕುಟುಂಬದ ಮುಗಿಸಲು ಹೊರಟಿದ್ದಾರೆ ಎಂಬ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇವಣ್ಣ ನಾನು ಅಂತಹ ಹೇಳಿಕೆಗಳಿಗೆ ರಿಯಾಕ್ಟ್ ಮಾಡುವುದಿಲ್ಲ” ಅದೇನು ನನಗೆ ಗೊತ್ತಿಲ್ಲಪ್ಪ..!! ದೇವೇಗೌಡರಿಗೆ ಈ ಜಿಲ್ಲೆಯ ಬಗ್ಗೆ ಎಲ್ಲವೂ ಗೊತ್ತಿದೆ ಅವರು ಏನು ಹೇಳುತ್ತಾರೆ ಅದನ್ನು ಕೇಳುತ್ತೇನೆ. ಹಾಸನ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳನ್ನು ಗೆಲ್ಲುವುದು ನನ್ನ ಪ್ರಥಮ ಆದ್ಯತೆ ಎಂದರು.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿ ಹಾಸನ ಜಿಲ್ಲೆಯ ಜೆಡಿಎಸ್ ಟಿಕೆಟ್ ನಿರ್ಧಾರ ಕುರಿತು ದೊಡ್ಡವರು ತೀರ್ಮಾನ ಮಾಡುತ್ತಾರೆ. ರೇವಣ್ಣ ಅವರು ಹಾಸನ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗಿ ಅಂದಿದ್ದಾರೆ ಅದನ್ನು ಬಿಟ್ಟರೆ ನಾನೇನು ತೀರ್ಮಾನ ಕೈಗೊಂಡಿಲ್ಲ. ಹಾಸನ ಜೆಡಿಎಸ್ ಟಿಕೆಟ್ ಗೊಂದಲ ವಿಚಾರವಾಗಿ ರೇವಣ್ಣ ಅವರನ್ನೇ ಕೇಳಿ ಎಂದರು.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…