ಬಳ್ಳಾರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್‌ಎಫ್ ಯೋಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈ ಎನ್‌ಎಂಡಿಸಿ ಆಸ್ಪತ್ರೆ ಮೃತಪಟ್ಟಿದ್ದಾರೆ.

ಯಲ್ಲಪ್ಪ ಬಸವರಾಜ್ ಸೂರಣಗಿ(34) ಮೃತಪಟ್ಟ ದುರ್ದೈವಿ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬರ್ವಾಡ ಗ್ರಾಮದವಾದ ಮೃತ ಯೋಧ, ಸಂಡೂರಿನ ದೋಣಿಮಲೈನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಅನಾರೋಗ್ಯಕ್ಕೊಳಗಾಗಿದ್ದ ಯೋಧ. ಚಿಕಿತ್ಸೆಗಾಗಿ NMDC ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.